ರೋಗಿಗಳ ಸುರಕ್ಷತೆಗೆ ಆದ್ಯತೆ ನೀಡಿ: ಡಾ.ಟಿ. ದಿಲೀಪಕುಮಾರ್‌

KannadaprabhaNewsNetwork |  
Published : Dec 06, 2025, 03:15 AM IST
(ಫೋಟೊ 5ಬಿಕೆಟಿ8, (1)ಪೋಟೋ 02 ಸಿಮ್ಯುಲೇಶನ್ ಕೇಂದ್ರ ವೀಕ್ಷಣೆ.) | Kannada Prabha

ಸಾರಾಂಶ

ವೈದ್ಯಕೀಯ ಕ್ಷೇತ್ರದಲ್ಲಿ ನರ್ಸಿಂಗ್ ಸಿಬ್ಬಂದಿಯ ಸೇವೆ ಮಹತ್ವದ್ದಾಗಿದೆ. ಚಿಕಿತ್ಸೆಯ ಸಂದರ್ಭ ರೋಗಿಗಳ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಈ ದಿಸೆಯಲ್ಲಿ ತರಬೇತಿ ಹೊಂದಿದ ಸಿಬ್ಬಂದಿಯ ಅವಶ್ಯಕತೆ ಆಸ್ಪತ್ರೆಗಳಲ್ಲಿ ಅಗತ್ಯವಿದೆ ಎಂದು ನವದೆಹಲಿಯ ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಡಾ.ಟಿ. ದಿಲೀಪಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವೈದ್ಯಕೀಯ ಕ್ಷೇತ್ರದಲ್ಲಿ ನರ್ಸಿಂಗ್ ಸಿಬ್ಬಂದಿಯ ಸೇವೆ ಮಹತ್ವದ್ದಾಗಿದೆ. ಚಿಕಿತ್ಸೆಯ ಸಂದರ್ಭ ರೋಗಿಗಳ ಸುರಕ್ಷತೆ ಮೊದಲ ಆದ್ಯತೆಯಾಗಿದೆ. ಈ ದಿಸೆಯಲ್ಲಿ ತರಬೇತಿ ಹೊಂದಿದ ಸಿಬ್ಬಂದಿಯ ಅವಶ್ಯಕತೆ ಆಸ್ಪತ್ರೆಗಳಲ್ಲಿ ಅಗತ್ಯವಿದೆ ಎಂದು ನವದೆಹಲಿಯ ಇಂಡಿಯನ್ ನರ್ಸಿಂಗ್ ಕೌನ್ಸಿಲ್ ಅಧ್ಯಕ್ಷ ಡಾ.ಟಿ. ದಿಲೀಪಕುಮಾರ್‌ ಹೇಳಿದರು.

ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಸಜ್ಜಲಶ್ರೀ ನರ್ಸಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ರಾಷ್ಟ್ರೀಯ ರೆಫರೆನ್ಸ್ ಸಿಮ್ಯುಲೇಶನ್ ಕೇಂದ್ರ ಹಾಗೂ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಪ್ರಮಾಣೀಕರಣ ಕೇಂದ್ರ ಉದ್ಘಾಟಿಸಿ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನರ್ಸಿಂಗ್ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ ಬಹುದಿನಗಳ ಕನಸಾಗಿತ್ತು. ಈಗ ಸಿಮ್ಯುಲೇಶನ್ ಕೇಂದ್ರದ ಸ್ಥಾಪನೆಯ ಮೂಲಕ ಆ ಕನಸು ನನಸಾಗುತ್ತಿದೆ. ಬಿವಿವಿ ಸಂಘದಲ್ಲಿ ಅತ್ಯಂತ ಆಧುನಿಕ ಸಿಮ್ಯುಲೇಶನ್ ಕೇಂದ್ರ ಸ್ಥಾಪಿಸುವುದರ ಮೂಲಕ ಡಾ.ವೀರಣ್ಣ ಚರಂತಿಮಠ ಅವರು ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ. ಈ ಕೇಂದ್ರದಲ್ಲಿ ತರಬೇತಿ ಹೊಂದಿ ನರ್ಸಿಂಗ್‌ ವೃತ್ತಿಪರರು ವೈದ್ಯಕೀಯ ಕ್ಷೇತ್ರ ಬಲಪಡಿಸಲಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಭಗವಾನ ಬಿ.ಸಿ., ಭಾರತ ನರ್ಸಿಂಗ್ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಈ ಕ್ಷೇತ್ರದಲ್ಲಿ ಸಂಶೋಧನೆ ಪ್ರಗತಿಯಲ್ಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತರನ್ನು ರೂಪಿಸಲು ತರಬೇತಿಗಾಗಿ ಸಿಮ್ಯುಲೇಶನ್ ಕೇಂದ್ರಗಳ ಅಗತ್ಯವಿದ್ದು, ವಿಶೇಷವಾಗಿ ನಸಿಂಗ್‌ ಸಿಬ್ಬಂದಿಗೆ ತರಬೇತಿ ನೀಡಬೇಕಾಗಿದೆ ಎಂದ ಅವರು, ಗುಣಮಟ್ಟದ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಡಾ.ವೀರಣ್ಣ ಚರಂತಿಮಠ ಅವರು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸುತ್ತಿರುವುದನ್ನು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಮಾತನಾಡಿ, ಕೋವಿಡ್ ಸಂದರ್ಭ ನರ್ಸಿಂಗ್ ಸಿಬ್ಬಂದಿಯ ಸೇವೆ ಅವಿಸ್ಮರಣೀಯ. ದೇಶದ ವಿವಿಧ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸಿಂಗ್ ವೃತ್ತಿಪರರು ಈ ಸಿಮ್ಯುಲೇಶನ್ ಕೇಂದ್ರದಲ್ಲಿ ತರಬೇತಿ ಹೊಂದಲು ಅವಕಾಶವಿದೆ. ಈ ಕೇಂದ್ರದ ಸ್ಥಾಪನೆಗಾಗಿ ಅಗತ್ಯ ಮಾರ್ಗದರ್ಶನ ನೀಡಿದ ಭಾರತೀಯ ನರ್ಸಿಂಗ್ ಮಂಡಳಿ, ಜಪೈಗೊ ಹಾಗೂ ಲ್ಯಾರ್ಡಲ್ ಮೆಡಿಕಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆಗಳು ಸಲ್ಲಿಸಿದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮತ್ತು ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ) ವೇದಿಕೆಯಲ್ಲಿದ್ದರು.

ಒಡಂಬಡಿಕೆ: ಇದೇ ವೇಳೆ ನರ್ಸಿಂಗ್ ಜ್ಞಾನ ಸಂಶೋಧನೆ ಹಾಗೂ ತರಬೇತಿಗಾಗಿ ಬಿವಿವಿ ಸಂಘ, ಭಾರತೀಯ ನರ್ಸಿಂಗ್ ಮಂಡಳಿ, ಜಪೈಗೊ ಮತ್ತು ಲ್ಯಾರ್ಡಲ್ ಮೆಡಿಕಲ್ ನಡುವೆ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಸಜ್ಜಲಶ್ರೀ ನರ್ಸಿಂಗ್‌ ಕಾಲೇಜ್‌ ಪ್ರಾಚಾರ್ಯ ಡಾ.ದಿಲೀಪ ನಾಟೆಕರ್ ಸ್ವಾಗತಿಸಿದರು. ಸಿಮ್ಯುಲೇಶನ್ ಕೇಂದ್ರದ ಮಹತ್ವ ಕುರಿತು ಲ್ಯಾರ್ಡಲ್ ಮೆಡಿಕಲ್‌ ಮ್ಯಾನೇಜಿಂಗ್ ಡೈರೆಕ್ಟರ್ ಸಂಜೀವಸಿಂಗ್ ಮತ್ತು ಜಪೈಗೊ ಸಂಸ್ಥೆಯ ಡೆಪ್ಯುಟಿ ಡೈರೆಕ್ಟರ್ ಡಾ.ಕಮಲೇಶ ಲಾಲಚಂದಾನಿ ಪ್ರಾಸ್ತಾವಿಕ ಮಾತನಾಡಿದರು. ವಿದೇಶಗಳಿಂದ ಆಗಮಿಸಿದ್ದ ನರ್ಸಿಂಗ್ ತಜ್ಞರು ಸಿಮ್ಯುಲೇಶನ್ ಕೇಂದ್ರದ ಅಗತ್ಯ ಕುರಿತು ಉಪನ್ಯಾಸ ನೀಡಿದರು. ಬಿವಿವಿ ಸಂಘದ ವತಿಯಿಂದ ಡಾ.ದಿಲೀಪಕುಮಾರ್‌, ಡಾ.ಭಗವಾನ ಬಿ.ಸಿ. ಮತ್ತು ಆಹ್ವಾನಿತ ಅತಿಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಉದ್ಘಾಟನೆಗೊಂಡ ರಾಷ್ಟ್ರೀಯ ರೆಫರೆನ್ಸ್ ಸಿಮ್ಯುಲೇಶನ್ ಕೇಂದ್ರದಲ್ಲಿ 7ರವರೆಗೆ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದ್ದು, ಇಂಗ್ಲೆಂಡ್, ಆಸ್ಟ್ರೇಲಿಯಾ, ಸಿಂಗಪುರ ದೇಶಗಳಿಂದ ನರ್ಸಿಂಗ್ ವಿಜ್ಞಾನ ತಜ್ಞರು ವಿಶೇಷ ಉಪನ್ಯಾಸ ಹಾಗೂ ಶಿಬಿರಾರ್ಥಿಗಳಿಗೆ ತರಬೇತಿ ನೀಡುವರು. ಕರ್ನಾಟಕ ಮತ್ತು ವಿವಿಧ ರಾಜ್ಯಗಳಿಂದ ಸಾವಿರ ನರ್ಸಿಂಗ್‌ ಸಿಬ್ಬಂದಿ ತರಬೇತಿ ಪಡೆಯಲು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಿ.ವಿ.ವಿ.ಸಂಘದ ಗೌರವಾನ್ವಿತ ಸದಸ್ಯರು, ವಿವಿಧ ಕ್ಷೇತ್ರಗಳ ಆಹ್ವಾನಿತ ಗಣ್ಯರು, ಅಂಗಸಂಸ್ಥೆಗಳ ಮುಖ್ಯಸ್ಥರು, ಮಾಧ್ಯಮ ಮಿತ್ರರು,ನರ್ಸಿಂಗ್ ಕಾಲೇಜುಗಳ ಮುಖ್ಯಸ್ಥರು, ಬೋಧಕರು ಮತ್ತು ವಿದ್ಯಾಥರ್ಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಜಾಸ್ಮಿನ್ ಡಿಸೋಜ ನಿರೂಪಿಸಿದರು. ಡಾ.ಶ್ರೀಹರ್ಷ ವಂದಿಸಿದರು. ಬಿವಿವಿ ಸಂಘದಲ್ಲಿ ಅತ್ಯಂತ ಆಧುನಿಕ ಸಿಮ್ಯುಲೇಶನ್ ಕೇಂದ್ರ ಸ್ಥಾಪಿಸುವುದರ ಮೂಲಕ ಡಾ.ವೀರಣ್ಣ ಚರಂತಿಮಠ ಅವರು ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿದ್ದಾರೆ.

-ಡಾ.ಟಿ.ದಿಲೀಪಕುಮಾರ್‌ ಅಧ್ಯಕ್ಷರು ಇಂಡಿಯನ್ ನರ್ಸಿಂಗ್ ಕೌನ್ಸಿಲ್, ನವದೆಹಲಿಗುಣಮಟ್ಟದ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಡಾ.ವೀರಣ್ಣ ಚರಂತಿಮಠ ಅವರು ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸುತ್ತಿದ್ದಾರೆ.

- ಡಾ.ಭಗವಾನ ಬಿ.ಸಿ., ಉಪಕುಲಪತಿಗಳು, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಬೆಂಗಳೂರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಟ್ಲ: 14ರಂದು ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮ
ಸಿ ಅಂಡ್‌ ಡಿ, ಸೆಕ್ಷನ್-‌ 4 ಸಮಸ್ಯೆಗೆ ಸರ್ಕಾರದ ಸ್ಪಂದನೆ: ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆದ ರೈತರು