ವಾಹನಗಳ ಸೂಕ್ತ ನಿರ್ವಹಣೆಗೆ ಆದ್ಯತೆ ನೀಡಿ: ಶಾಂತನಗೌಡ

KannadaprabhaNewsNetwork |  
Published : Jun 30, 2024, 12:48 AM IST
ಹೊನ್ನಾಳಿ ಫೋಟೋ 29ಎಚ್.ಎಲ್.ಐ1. ಪಚ್ಚಣದ   ಟಿಎಪಿಸಿಎಂಎಸ್ ಆವರಣದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಅವರು 25 ವಿಶೇಷ ಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರವಾಹನಗಳನ್ನು ವತರಿಸಿ ಮಾತನಾಡಿದರು.  | Kannada Prabha

ಸಾರಾಂಶ

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ 25 ವಿಶೇಷಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಅವುಗಳನ್ನು ಫಲಾನುಭವಿಗಳು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಉದ್ಯೋಗ ಕಂಡುಕೊಳ್ಳಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- 25 ವಿಶೇಷಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನ ವಿತರಣೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ 25 ವಿಶೇಷಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಅವುಗಳನ್ನು ಫಲಾನುಭವಿಗಳು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಉದ್ಯೋಗ ಕಂಡುಕೊಳ್ಳಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಶನಿವಾರ ಟಿಎಪಿಸಿಎಂಎಸ್ ಆವರಣದಲ್ಲಿ 2023- 2024ನೇ ಸಾಲಿನ ತಾಲೂಕು ಪಂಚಾಯಿತಿ ರಾಜ್ಯ ಹಣಕಾಸು ಆಯೋಗದ ಅರ್ನಿಬಂಧಿತ ಅನುದಾನದಡಿ ಶೇ.5ರ ವಿಶೇಷಚೇತನರ ಕಾಯ್ದಿರಿಸಿದ ಅನುದಾನದಡಿ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

ವಿಶೇಷಚೇತನರು ದೈಹಿಕವಾಗಿ ಅಂಗ ಊನವಾಗಿದ್ದರೂ ತಮ್ಮದೇಯಾದ ಸಾಮರ್ಥ್ಯ, ಬುದ್ಧಿವಂತಿಕೆ ಮತ್ತು ಶಕ್ತಿ ಹೊಂದಿದ್ದಾರೆ. ಅವರಿಗೆ ಪೂರಕವಾಗಿ ನಾವು ವಾಹನ ಸೌಲಭ್ಯ, ಸೌಕರ್ಯಗಳನ್ನು ಕಲ್ಪಿಸಿಕೊಟ್ಟರೆ ತಮ್ಮ ದುಡಿಮೆ ಕಂಡುಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗುತ್ತಾರೆ. ಇದರಿಂದ ಅವರ ಕೌಟುಂಬಿಕ ಜೀವನವೂ ಸುಧಾರಣೆ ಆಗುತ್ತದೆ ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕಾಧಿಕಾರಿ ಎಚ್.ವಿ. ರಾಘವೇಂದ್ರ ಮಾತನಾಡಿ, ಶಾಸಕರ ಸೂಚನೆ ಮೇರೆಗೆ ವಿಕಲಚೇತನರ ಪ್ರಮಾಣ ಪತ್ರ ಹಾಗೂ ವಾಹನ ಚಾಲನೆ ಪರವಾನಿಗೆ ಹೊಂದಿದವರನ್ನು ಆಯ್ಕೆ ಮಾಡಿ, ಅವಳಿ ತಾಲೂಕಿನ 25 ಜನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನಗಳನ್ನು ವಿತರಿಸಿರುವುದಾಗಿ ಹೇಳಿದರು.

ಈ ಸಂದರ್ಭ ತಾ.ಪಂ. ಸಿಬ್ಬಂದಿ ಲೋಹಿತ್‍ಕುಮಾರ್ ಉಪಸ್ಥಿತರಿದ್ದರು. ಫಲಾನುಭವಿಗಳ ಕುಟುಂಬದವರು ಹಾಜರಿದ್ದರು.

- - - -29ಎಚ್.ಎಲ್.ಐ1:

ಹೊನ್ನಾಳಿ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಅವರು ಅರ್ಹ ವಿಶೇಷಚೇತನರಿಗೆ ರೆಟ್ರೋ ಫಿಟ್‍ಮೆಂಟ್ ದ್ವಿಚಕ್ರ ವಾಹನಗಳ ಸೌಲಭ್ಯ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ