ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಡಲತೀರಗಳಿಗೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲಿನ ಭೌಗೋಳಿಕ ಮಾಹಿತಿ ಕೊರತೆಯಿಂದ ಜೀವಹಾನಿಗಳು ಉಂಟಾಗುತ್ತವೆ. ಈ ಬಗ್ಗೆ ಪ್ರವಾಸಿಗರಿಗೆ ಸರ್ವಋತುಗಳಲ್ಲಿ ಸ್ಥಳೀಯ ಭೌಗೋಳಿಕ ಮಾಹಿತಿ ನೀಡುವುದು, ಅವರ ಭದ್ರತೆ, ಸುರಕ್ಷತೆ ಸೇರಿದಂತೆ ಮೂಲಸೌಲಭ್ಯಗಳ ವ್ಯವಸ್ಥೆಗಳನ್ನು ಲ್ಪಿಸುವುದು ಒಳಗೊಂಡಂತೆ ಯೋಜನೆಗಳನ್ನು ರೂಪಿಸಬೇಕು ಎಂದರು.ಜಿಲ್ಲೆಯ ಪ್ರಾಕೃತಿಕ, ಧಾರ್ಮಿಕ ಪ್ರವಾಸೋದ್ಯಮಗಳ ಬಗ್ಗೆ ದೇಶವಿದೇಶಗಳಲ್ಲಿ ಪ್ರಚಾರವಾಗುವಂತೆ ವೆಬ್ಸೈಟನ್ನು ಅಭಿವೃದ್ಧಿಪಡಿಸಬೇಕು. ಇದರಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರಗಳು, ಅಲ್ಲಿ ಪ್ರವಾಸಿಗರಿಗೆ ಸಿಗುವ ಸೌಲಭ್ಯಗಳು, ಕರಾವಳಿಯ ಪರಂಪರೆ, ಮಾರ್ಗಸೂಚಿಗಳು ಹಾಗೂ ನೆರೆಹೊರೆ ಜಿಲ್ಲೆಯ ಪ್ರವಾಸಿತಾಣಗಳ ಮಾಹಿತಿಯನ್ನು ಒಳಗೊಂಡಂತೆ ರಚಿಸಿದ್ದಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಇದನ್ನು ಆಗಿಂದಾಗ್ಗೆ ಉನ್ನತೀಕರಣಗೊಳಿ, ನಿರ್ವಹಣೆ ಮಾಡಬೇಕೆಂದು ತಿಳಿಸಿದರು.
ಕುಂದಾಪುರದ ಕೋಡಿಯ ಸೀವಾಕ್ ಪಕ್ಕದಲ್ಲಿ ಕೋಡಿ ಬೀಚ್ನ ಪಕ್ಕದಲ್ಲಿ 26 ಎಕ್ರೆ ಜಮೀನನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿ, ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಸ್ಥಳವನ್ನು ಶೀಘ್ರದಲ್ಲಿಯೇ ಪ್ರವಾಸೋದ್ಯಮ ಇಲಾಖೆಗೆ ನೀಡಬೇಕು ಎಂದರು.
ರಾಜ್ಯ ಪ್ರವಾಸೋದ್ಯಮ ಇಲಾಖೆ ಈಗಾಗಲೇ ಜಿಲ್ಲೆಯ ಕಡಲತೀರಗಳ ಪ್ರವಾಸೋದ್ಯಮವನ್ನು ಖಾಸಗಿಯವರ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲು ಸೂಚನೆ ನೀಡಿದ್ದು, ಇದರ ಅನುಷ್ಠಾನಕ್ಕೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಈಗಾಗಲೇ ಪ್ರವಾಸಿಗರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಇವುಗಳನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಸರಕಾರಕ್ಕೆ ಕಳುಹಿಸಿರುವ ಪ್ರಸ್ತಾವನೆಗಳನ್ನು ಅನುಸರಿಸಿ, ಅನುಮೋದನೆ ಪಡೆದು ಅನುಷ್ಠಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಡಿಎಫ್ಓ ಗಣಪತಿ, ಉಪವಿಭಾಗಾಧಿಕಾರಿ ಮಹೇಶ್ಚಂದ್ರ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂ ಅಧ್ಯಕ್ಷ ಮನೋಹರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.