ಹಿಂದೂಗಳ ಧಾರ್ಮಿಕ ಆಚರಣೆ ವೇಳೆ ಸುರಕ್ಷತೆಗೆ ಆದ್ಯತೆ ನೀಡಿ

KannadaprabhaNewsNetwork |  
Published : Mar 06, 2026, 02:30 AM IST
ಹಿಂದೂಗಳು ಮತ್ತವರ ಧಾರ್ಮಿಕ ಆಚರಣೆಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಶೀಘ್ರ ಹಾಗೂ ನಿಸ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬುಧವಾರ ಹಗರಿಬೊಮ್ಮನಹಳ್ಳಿ ಹಿಂದೂ ಜನ ಜಾಗೃತಿ ಸಮಿತಿಯ ತಾಲೂಕು ಘಟಕ ಮನವಿ ಸಲ್ಲಿಸಿತು. | Kannada Prabha

ಸಾರಾಂಶ

ರಾಜ್ಯಾದ್ಯಂತ ವ್ಯವಸ್ಥಿತವಾಗಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಸರ್ಕಾರ ಗಾಳಿಗೆ ತೂರಿದೆ.

ಹಗರಿಬೊಮ್ಮನಹಳ್ಳಿ: ಹಿಂದೂ ಹಬ್ಬಗಳನ್ನು ಗುರಿಯಾಗಿಸಿಕೊಂಡು ರಾಜ್ಯಾದ್ಯಂತ ವ್ಯವಸ್ಥಿತವಾಗಿ ಕಲ್ಲು ತೂರಾಟ ನಡೆಸಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಸರ್ಕಾರ ಗಾಳಿಗೆ ತೂರಿದೆ. ರಾಜ್ಯಾದ್ಯಂತ ಅರಾಜಕತೆ ಸೃಷ್ಟಿಯಾಗಿದೆ ಎಂದು ಹಿಂದೂ ಜನ ಜಾಗೃತಿ ಸಮಿತಿಯ ಸಂಚಾಲಕ ವೆಂಕಟರಮಣ ಆತಂಕ ವ್ಯಕ್ತಪಡಿಸಿದರು.ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರಕರಣಗಳ ಕುರಿತು ಶೀಘ್ರ ಹಾಗೂ ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂ ಜನ ಜಾಗೃತಿ ಸಮಿತಿಯ ತಾಲೂಕು ಘಟಕ ಇಲ್ಲಿನ ತಾಲೂಕು ಆಡಳಿತ ಕಚೇರಿಯ ಬಳಿ ಬುಧವಾರ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ವೇಳೆ ನಡೆಯುತ್ತಿದ್ದ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಮುರುಡೇಶ್ವರದಲ್ಲಿ ಹಿಂದೂಗಳ ಮನೆಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಶಿವಮೊಗ್ಗದ ಉರಗಡೂರು ಗ್ರಾಮದಲ್ಲಿ ಹಿಂದೂ ಬಾಲಕನ ಹತ್ಯೆಯಾಗಿದೆ. ಈ ಯಾವ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಿಲ್ಲ ಎಂದು ದೂರಿದರು.

ಈ ಎಲ್ಲ ಪ್ರಕರಣಗಳಲ್ಲಿ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ಮಾರಣಾಂತಿಕ ದಾಳಿ ನಡೆಸಿದ್ದರೂ ಸರ್ಕಾರ ಮೌನ ವಹಿಸಿರುವುದು ಹಿಂದೂಗಳ ಪಾಲಿಗೆ ಆಘಾತಕಾರಿಯಾಗಿದೆ. ರಾಜ್ಯದ ಕಾನೂನು- ಸುವ್ಯವಸ್ಥೆಗೆ ಗಂಭೀರವಾದ ಸವಾಲು ಎದುರಾಗಿದ್ದರೂ ಸರ್ಕಾರ ತೆಪ್ಪಗಿರುವುದು ಓಲೈಕೆ ರಾಜಕೀಯದ ಉದಾಹರಣೆಗೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ಮೇಲಿನ ಎಲ್ಲ ದೌರ್ಜನ್ಯಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಲ್ಲು ತೂರಾಟ ನಡೆಸುವರ ಮೇಲೆ ಕೋಕಾ ಕಾಯಿದೆ ಪರಿಗಣಿಸಬೇಕು. ಜೊತೆಗೆ ಕಲ್ಲು ತೂರಾಟ, ಹತ್ಯೆ, ಚಾಕು ಇರಿತ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಿಂದೂಗಳ ಧಾರ್ಮಿಕ ಆಚರಣೆಗಳ ವೇಳೆ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ನಂತರ ಬೇಡಿಕೆಗಳ ಕುರಿತು ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿ, ಪೊಲೀಸ್ ಮಹಾ ನಿರ್ದೇಶಕರು ಮತ್ತು ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮಿತಿಯ ಸಂಚಾಲಕರಾದ ಶ್ರೀಮತಿ ಪೂಜಾ ಅಕ್ಕ, ಸದಸ್ಯರಾದ ವೈ.ಮಲ್ಲಪ್ಪ, ಸಿ.ಗುರುರಾಜಪ್ಪ, ಎ.ಎಂ. ಚಂದ್ರಮೌಳಿ, ಎಸ್.ಬಿ. ಶಂಭುಲಿಂಗಪ್ಪ, ವೈ.ವೀರಪ್ಪ, ಎಸ್.ಶಿವಪುತ್ರಪ್ಪ, ಡಿ.ಶಿವಣ್ಣ, ಜಿ.ವೀರೇಶ್, ಪ್ರಮೋದ್ ಮೇಘರಾಜ್, ವೇದಾ ಮೇಘರಾಜ್, ಶರಣಪ್ಪ, ಎಸ್.ಎಂ. ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸಾವು
ದುಬೈನಲ್ಲಿ ಸಿಲುಕಿದ್ದ ಬಳ್ಳಾರಿಗರು ಸುರಕ್ಷಿತವಾಗಿ ವಾಪಸ್