ಜಾನಪದ ಕಲೆಗಳ ಅನಾವರಣಕ್ಕೂ ಆದ್ಯತೆ ನೀಡಿ: ಲೋಕೇಶ್

KannadaprabhaNewsNetwork |  
Published : Mar 18, 2025, 12:30 AM IST
ಫೋಟೊ:೧೭ಕೆಪಿಸೊರಬ-೦೨ : ಸೊರಬ ತಾಲೂಕಿನ ಯಲಸಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಬೆಳದಿಂಗಳ ಸಾಹಿತ್ಯ ಮತ್ತು ಸಂಗ್ಯಾ-ಬಾಳ್ಯ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ. ಲೋಕೇಶ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪರ ಸಂಘಟನೆಗಳು ನಾಡು, ನುಡಿಯ ಜತೆಗೆ ಸಂಸ್ಕಾರ, ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳ ಅನಾವರಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವ ಪೀಳಿಗೆಗೆ ಗ್ರಾಮೀಣ ಕಲೆಗಳ ಪಾಠ ಕಲಿಸಿದಂತಾಗುತ್ತದೆ ಎಂದು ಯಲಸಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಲೋಕೇಶ್ ಹೇಳಿದರು.

ಕನ್ನಡಪರ ಸಂಘಟನೆಗಳಿಗೆ ಕರೆ । ಸಂಗ್ಯಾ-ಬಾಳ್ಯ ನಾಟಕ ಪ್ರದರ್ಶನ

ಕನ್ನಡಪ್ರಭ ವಾರ್ತೆ ಸೊರಬ

ಕನ್ನಡಪರ ಸಂಘಟನೆಗಳು ನಾಡು, ನುಡಿಯ ಜತೆಗೆ ಸಂಸ್ಕಾರ, ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗಳ ಅನಾವರಣಕ್ಕೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವ ಪೀಳಿಗೆಗೆ ಗ್ರಾಮೀಣ ಕಲೆಗಳ ಪಾಠ ಕಲಿಸಿದಂತಾಗುತ್ತದೆ ಎಂದು ಯಲಸಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಲೋಕೇಶ್ ಹೇಳಿದರು.

ತಾಲೂಕಿನ ಯಲಸಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಬೆಳದಿಂಗಳ ಸಾಹಿತ್ಯ ಮತ್ತು ಸಂಗ್ಯಾ-ಬಾಳ್ಯ ನಾಟಕ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಜನಪದ ಸಂಸ್ಕೃತಿ ಇನ್ನೂ ಹಳ್ಳಿಗಳಲ್ಲಿ ಜೀವಂತವಾಗಿದೆ. ಕಲಾವಿದರನ್ನು ಪ್ರೋತ್ಸಾಹಿಸುವ ಮನೋಭಾವ ಕೂಡ ನೈಜವಾಗಿದ್ದು ನಮ್ಮ ಗ್ರಾಮದಲ್ಲಿ ಬೆಳದಿಂಗಳ ಸಾಹಿತ್ಯ ಏರ್ಪಡಿಸಿದ್ದು ಸಂತಸದಾಯಕ ಸಂಗತಿ ಎಂದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವ ಮೂಲಕ ಕನ್ನಡತನವನ್ನು ಇನ್ನಷ್ಟು ಗಟ್ಟಿಗೊಳಿಸಲು ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದರು.ಸಮಾಜ ಸೇವಕ ರಾಜು ಹಿರಿಯಾವಲಿ ಮಾತನಾಡಿ, ಒಂದು ಕಾಲದಲ್ಲಿ ಬಯಲುನಾಡಿನ ಕಥೆಯಾದ ಸಂಗ್ಯಬಾಳ್ಯ ನಾಟಕ ಮಲೆನಾಡಿನಲ್ಲಿ ಜನಪ್ರಿಯತೆ ಪಡೆದಿತ್ತು. ಇಂತಹ ನಾಟಕ ಪುನಃ ನಮ್ಮ ತಾಲ್ಲೂಕು ಹವ್ಯಾಸಿ ಕಲಾವಿದರಿಂದ ಅನಾವರಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.ಪರಶುರಾಮ ಸಣ್ಣಬೈಲ್, ನಾಗರಾಜ ಜೈನ್, ವಿ.ಜಾನಕಪ್ಪ ಮಾತನಾಡಿದರು.

ಉಪನ್ಯಾಸಕ ವಿಜಯಕುಮಾರ್ ದಟ್ಟೇರ್ ಸಾಹಿತಿ ಚಂದ್ರಶೇಖರ ಕಂಬಾರ ಸಾಹಿತ್ಯ ಕುರಿತು ಮಾತನಾಡಿದರು. ತಾಲೂಕು ಕಸಾಪ ಅಧ್ಯಕ್ಷ ಷಣ್ಮುಖಾಚಾರ್ ಅಧ್ಯಕ್ಷತೆ ವಹಿಸಿದ್ದರು.

ಶ್ರೀಪಾದ ಬಿಚ್ಚುಗತ್ತಿ, ಕಲಾವಿದ ಎಚ್.ಎಂ.ಪ್ರಶಾಂತ್, ಸುಬ್ರಹ್ಮಣ್ಯ ಗುಡಿಗಾರ್, ತಾಲೂಕು ಕಸಾಪ ಬಳಗದ ಕೆ. ಲಿಂಗರಾಜಗೌಡ, ಮಂಚಿ ರಮೇಶ್, ವಿಶ್ವನಾಥ್ ಹೆಚ್ಚೆ ಸೇರಿದಂತೆ ಪದಾಧಿಕಾರಿಗಳು ಸದಸ್ಯರು ಮತ್ತಿತರರಿದ್ದರು.

ನಂತರ ತಾಲೂಕಿನ ಹವ್ಯಾಸಿ ಕಲಾವಿದರ ಅಭಿನಯಿಸಿದ ಸಂಗ್ಯಾ-ಬಾಳ್ಯಾ ನಾಟಕ ಪ್ರದರ್ಶನಗೊಂಡಿತು. ತಂಡದ ಹಿಮ್ಮೇಳನದಲ್ಲಿ ಭಾಗವತರರಾಗಿ ಪ್ರಶಾಂತ.ಎಚ್.ಎಂ, ಸಾವಿತ್ರಿ, ರೋಹಿಣಿ ಕಕ್ಕರಸಿ, ರಾಘವೇಂದ್ರ, ಈರಪ್ಪ ಶಿಕ್ಷಕರು, ಪೂರ್ಣಪ್ರಜ್ಞ ಬೆಳೆಯೂರು, ಸಂದೇಶ್ ಮಳಲಗದ್ದೆ ಮುಮ್ಮೇಳದಲ್ಲಿ ರೇವಣಪ್ಪ ಬಿದರಗೇರಿ, ಹರ್ಷ ಹೆಗಡೆ, ಸುಬ್ರಹ್ಮಣ್ಯ ಎಸ್. ಗುಡಿಗಾರ್, ರೇಣುಕಮ್ಮ ಕಪ್ಪಗಳಲೆ, ಗೋಪಾಲ ವಕೀಲ ಹೆಗ್ಗೋಡು, ಸುಶೀಲಮ್ಮ ಸೊರಬ, ಡಾಕಪ್ಪ ವಕೀಲ, ಲಕ್ಷ್ಮಣಪ್ಪ ಶಿಕ್ಷಕರು ಪಾಲ್ಗೊಂಡು ಯಶಸ್ವಿ ಪ್ರದರ್ಶನ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!