ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಅದ್ಯತೆ: ಶರತ್ ಬಚ್ಚೇಗೌಡ

KannadaprabhaNewsNetwork |  
Published : Apr 20, 2026, 01:30 AM IST
ಸೂಲಿಬೆಲೆ ಹೋಬಳಿ ಬಾವಾಪುರ ಗ್ರಾಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ ಬಿ.ಎನ್.ಗೋಪಾಲಗವಡ, ಎಂ.ಬಿ.ವೆAಕಟೇಶ್, ಡಾ.ಡಿ.ಟಿ.ವೆಂಕಟೇಶ್ ಇತರರು ಇದ್ದರು. | Kannada Prabha

ಸಾರಾಂಶ

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ಸದಾ ಸಿದ್ಧರಿದ್ದು ಜನತೆಯ ಆಶಯಗಳಿಗೆ ಅನುಗುಣವಾಗಿ ಬೇಡಿಕೆಯ ಕಾಮಗಾರಿಗಳಿಗೆ ಪ್ರಥಮ ಅಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಸೂಲಿಬೆಲೆ

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾವು ಸದಾ ಸಿದ್ಧರಿದ್ದು ಜನತೆಯ ಆಶಯಗಳಿಗೆ ಅನುಗುಣವಾಗಿ ಬೇಡಿಕೆಯ ಕಾಮಗಾರಿಗಳಿಗೆ ಪ್ರಥಮ ಅಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಹೋಬಳಿ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸೂಲಿಬೆಲೆ ಹೋಬಳಿ ವ್ಯಾಪ್ತಿಯ ಚೀಮಸಂದ್ರ ಗ್ರಾಮದಲ್ಲಿ ಸುಮಾರು 25 ಲಕ್ಷ ರು.ರಸ್ತೆ ಕಾಮಗಾರಿ, ಬಾವಾಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ25 ಲಕ್ಷ ರು. ಟಿ.ಅಗ್ರಹಾರ ಗ್ರಾಮದಲ್ಲಿ ರಸ್ತೆ ನಿರ್ಮಾಣ 25 ಲಕ್ಷ ರು., ಗುಳ್ಳಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ 25 ಲಕ್ಷ ರು., ಮುತ್ತಕದಹಳ್ಳಿ, ಗ್ರಾಮದಲ್ಲಿ 25 ಲಕ್ಷ ರು., ಬೀಮಕನಹಳ್ಳಿ ಗ್ರಾಮದಲ್ಲಿ 50 ಲಕ್ಷ ರು. ರಸ್ತೆ ಕಾಮಗಾರಿ ಈ-,ಮುತ್ಸಂದ್ರ ಗ್ರಾಮದಲ್ಲಿ 20 ಲಕ್ಷ ರು. ಕಾಮಗಾರಿ,ಹಾಗೂ ನಗರೇನಹಳ್ಳಿ ಗ್ರಾಮಗಳಲ್ಲಿ 30 ಲಕ್ಷ ರು. ರಸ್ತೆ ಕಾಮಗಾರಿ, ಒಟ್ಟು 2.25 ಕೋಟಿ ರು.ವೆಚ್ಚದ ಕಾಂಕ್ರೀಟ್ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನೆರವೇರಿಸಲಾಗಿದೆ ಎಂದರು.

ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ ಮಾತನಾಡಿ, ದೊಡ್ಡಹರಳಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ತಮ್ಮರಸನಹಳ್ಳಿ, ಟಿ.ಅಗ್ರಹಾರ, ಬಾವಾಪುರ ಗ್ರಾಮಗಳಲ್ಲಿ ಆಹಾರ ನಾಗರಿಕ ಇಲಾಖೆಯ ವತಿಯಿಂದ ನೂತನವಾಗಿ ಅರ್ಜಿ ಹಾಕಲಾಗಿದ್ದ 100 ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗಳ ವಿತರಣೆ ಮಾಡಿದ್ದೇವೆ ಎಂದರು.-

ಸೂಲಿಬೆಲೆ ಹೋಬಳಿ ದೊಡ್ಡಹರಳಗೆರೆ ಹಾಗೂ ಕಂಬಳೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆರ್‌ಡಿಪಿಆರ್ (ಮುಖ್ಯಮಂತ್ರಿ) ಅನುದಾನ ,೩೦೫೪ ಯೋಜನೆ ಅನುದಾನ ಎಸ್.ಸಿ.ಪಿ/ಟಿಎಸ್‌ಪಿ ಅನುದಾನ ಸೇರಿದಂತೆ ೨.೨೫ ಕೋಟಿ ವೆಚ್ಚದ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ.

-ಶರತ್ ಬಚ್ಚೇಗೌಡ, ಶಾಸಕರು

ದೊಡ್ಡಹರಳಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿ ಹಾಗೂ ಕಂಬಳೀಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ತುಂಬಾ ಅಗತ್ಯವಿದ್ದ ರಸ್ತೆ ಕಾಮಗಾರಿಗೆ ಭೂಮಿಪೂಜೆ ಮಾಡಲಾಗಿದೆ. ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗಿದೆ. ಬಿ.ವಿ.ಸತೀಶಗೌಡ, ಬಮೂಲ್ ನಿರ್ದೇಶಕರು.

ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಕೆಎಂಫ್‌.ಮಂಜುನಾಥ್, ಎಲ್ ಅಂಡ್ ಟಿ ಮಂಜುನಾಥ್, ಹಾಪ್‌ಕಾಮ್ಸ್ ನಿರ್ದೇಶಕ ಎಂ.ಬಿ.ವೆಂಕಟೇಶಪ್ಪ, ಜಿಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ಮಾಜಿ ಸದಸ್ಯ ವೈಎಸ್‌ಎಂ ಮಂಜುನಾಥ್, ನಗರೇನಹಳ್ಳಿ ತಮ್ಮೇಗೌಡ,ತಾಪಂ.ಮಾಜಿ ಸದಸ್ಯ ಡಾ.ಡಿ.ಟಿ.ವೆಂಕಟೇಶ್, ಬಾವಾಪುರ ಮುನಿಶಾಮಿಗೌಡ, ಚನ್ನಿಗಲಾಪುರ ನಾರಾಯಣಸ್ವಾಮಿ, ಮುತ್ಸಂದ್ರ ಆನಂದಪ್ಪ, ನಗರೇನಹಳ್ಳಿ ನಾಗರಾಜಪ್ಪ, ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಗುಳ್ಳಹಳ್ಳಿ ಮುನಿಯಪ್ಪ, ನಿರ್ದೇಶಕ ತಮ್ಮೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಗಿ ಖರೀದಿ ಕೇಂದ್ರಕ್ಕೆ ಹೊರ ಜಿಲ್ಲೆಯ ರಾಗಿ
ಬಹುಮತವಿದ್ದರೂ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿಗರೇ ಅಡ್ಡಗಾಲು