ಕನ್ನಡಪ್ರಭ ವಾರ್ತೆ ಹಿರಿಯೂರು
ತಾಲೂಕಿನ ಬಿಕೆ ಹಟ್ಟಿ ಗ್ರಾಮದಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ನಡೆದ ಶ್ರೀ ರಂಗನಾಥ ಸ್ವಾಮಿಯ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ಬಳಿಕ ಮತಯಾಚನೆ ಮಾಡಿ ಮಾತನಾಡಿದರು.
ನೂರಾರು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ಧರ್ಮಪುರ ಕೆರೆಗೆ ನೀರು ಹರಿಸುವ ಯೋಜನೆ ನನ್ನ ತಂದೆ ಕೈಗೆತ್ತಿಕೊಂಡು ಈ ಭಾಗದ ಜನರ ಕನಸು ನನಸು ಮಾಡಿದ್ದಾರೆ. ಧರ್ಮಪುರ ಕೆರೆಗೆ ನೀರು ಬರಲು ಆಗ ಜಲಸಂಪನ್ಮೂಲ ಸಚಿವರಾಗಿದ್ದ ಗೋವಿಂದ ಕಾರಜೋಳರ ಶ್ರಮವೂ ಕಾರಣವಾಗಿದೆ. ಹಾಗಾಗಿ ಮತ್ತೊಮ್ಮೆ ಅವರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಬೇಕು ಎಂದರು.ದೇಶದಲ್ಲಿ ಮೂರನೇ ಬಾರಿಗೆ ಎನ್ಡಿಎ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ವಿಕಸಿತ ಭಾರತ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಮೈತ್ರಿ ಅಭ್ಯರ್ಥಿಗೆ ಅವಕಾಶ ಮಾಡಿ ಕೊಡುವ ಅವಶ್ಯಕತೆ ಇದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸೋಲುವ ಕುದುರೆಗೆ ಯಾಕೆ ಮತ ಹಾಕಿ ನಿಮ್ಮ ಅಮೂಲ್ಯ ಮತ ವ್ಯರ್ಥ ಮಾಡಿಕೊಳ್ಳಬೇಡಿ. ಗೆಲ್ಲುವ ಕುದುರೆ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಮತ ನೀಡಿ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ಅವಕಾಶ ಮಾಡಿ ಕೊಡಿ ಎಂದರು.
ಕೋಡಿಹಳ್ಳಿ, ಹರಿಯಬ್ಬೆ, ಸೇರಿದಂತೆ ವಿವಿಧ ಭಾಗಗಳಲ್ಲೂ ತಂದೆ ಗೋವಿಂದ ಕಾರಜೋಳ ಪರವಾಗಿ ಉಮೇಶ್ ಕಾರಜೋಳ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ರವಿಕುಮಾರ್, ಪುನೀತ್, ರಂಗಸ್ವಾಮಿ, ಶಿವು, ಆದರ್ಶ ಯಾದವ್, ವಿನೋದ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.