ಕನ್ನಡಪ್ರಭ ವಾರ್ತೆ ಯಾದಗಿರಿ
ಮೆರವಣಿಗೆಯು ನಗರದ ರೈಲ್ವೆ ನಿಲ್ದಾಣದಿಂದ ತೆರೆದ ಜೀಪ್ನಲ್ಲಿ ಹಾಗೂ ಬೈಕ್ ರ್ಯಾಲಿ ಮುಖಾಂತರ ರೈಲ್ವೆ ನಿಲ್ದಾಣ, ಲಾಲ್ ಬಹಾದ್ದೂರ್ ಶಾಸ್ತ್ರಿ ವೃತ್ತ, ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತ, ಡಿಗ್ರಿ ಕಾಲೇಜ್ ಮಾರ್ಗವಾಗಿ ಜಿಲ್ಲಾ ಕರವೇ ಕಾರ್ಯಾಲಯದವರೆಗೆ ನಡೆಯಿತು.
ಮೆರಣಿಗೆ ವೇಳೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕಡ್ಡಾಯ ನಾಮಫಲಕ ಬಳಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಗೆ ಎಚ್ಚತ್ತುಕೊಂಡ ರಾಜ್ಯ ಸರ್ಕಾರ, ಸರ್ಕಾರಿ ಮತ್ತು ಅರೆ ಸರ್ಕಾರಿ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡದ ಭಾಗವಾಗಿ ಶೇ.60:40 ಅನುಪಾತದಡಿ ಅಳವಡಿಸಲು ಸುಗ್ರೀವಾಜ್ಞೆ ಹೊರಡಿಸಿದ್ದು, ಬರುವ ದಿನಗಳಲ್ಲಿ ಅಂಗಡಿ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಸದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಕರವೇ ಮುಖಂಡರಾದ ಮಲ್ಲು ಮಾಳಿಕೇರಿ ಮಾತನಾಡಿ, ಕನ್ನಡಕ್ಕಾಗಿ ಕೇವಲ ಸೆರೆಮನೆ ವಾಸವಲ್ಲ, ಮುಂದೊಂದು ದಿನ ನಮ್ಮನ್ನ ಗಲ್ಲಿಗೇರಿಸಿದರೂ ಸಂತೋಷದಿಂದ ಪ್ರಾಣತೆತ್ತಲು ಸಿದ್ಧರಿದ್ದೇವೆ ಎಂದರು.