- ಆಲೂರಿನಲ್ಲಿ ₹1.15 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಆಲೂರು ಗ್ರಾಮದಲ್ಲಿ ಸುಮಾರು ₹1.15 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳ ರಸ್ತೆ ಸಂಪರ್ಕವನ್ನು ಸುಧಾರಿಸುವ ಮೂಲಕ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಹಾಗೂ ರೈತರ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆ ಎಂದರು.
ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ರೂಪಿಸಲಾಗಿದೆ. ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಗ್ರಾಮೀಣ ಯುವಕರ ಸಬಲೀಕರಣದ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯುವಜನರ ಅಭಿವೃದ್ಧಿಗೆ ₹10 ಲಕ್ಷ ಅನುದಾನ ಒದಗಿಸುವ ಮೂಲಕ ಅವರ ಪ್ರತಿಭೆ ಹಾಗೂ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಯುವ ಸಮುದಾಯವನ್ನು ಸಂಘಟಿಸಿ, ಅವರಲ್ಲಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಹೇಳಿದರು.
ಈ ಬಾರಿ ಬರಗಾಲ ಸಂಭವಿಸುವ ಮುನ್ಸೂಚನೆ ಕಂಡುಬರುತ್ತದೆ. ರೈತರು ಮಿತವಾಗಿ ನೀರು ಬಳಸಬೇಕು. ಕಡಿಮೆ ತೇವಾಂಶದಲ್ಲಿ ಬೆಳೆಯುವ ಬೆಳೆಗಳ ಬೆಳೆಯುವಂತೆ ಮನವಿ ಮಾಡಿದರು. ಆಲೂರು ಗ್ರಾಮದಲ್ಲಿ ದಿನದ 24 ಗಂಟೆ ಆಸ್ಪತ್ರೆ ಕಾರ್ಯನಿರ್ಹಿಸುವಂತೆ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ, ಗ್ರಾಮದಿಂದ ನಗರಕ್ಕೆ ಕಾಲೇಜುಗಳಿಗೆ ಹೋಗಿ ಹೆಣ್ಣುಮಕ್ಕಳು ಅರ್ಧಕ್ಕೆ ಮೊಟಕುಗೊಳಿಸುತ್ತಾರೆ ಎಂಬ ದೂರು ಇದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಪಿಯುಸಿ ಕಾಲೇಜು ಪ್ರಾರಂಭಿಸಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಮೆಳ್ಳೆಕಟ್ಟೆಯಲ್ಲಿ ಅಡುಗೆ ಕೋಣೆ ಉದ್ಘಾಟನೆ:
ಈ ಸಂದರ್ಭ ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಣ್ಣ, ಹುಲಿಕಟ್ಟೆ ಶಿವಣ್ಣ, ಅಣಜಿ ನಾಗರಾಜ್, ಆಲೂರು ಹೇಮಣ್ಣ, ಸೋಮಣ್ಣ, ಚನ್ನಬಸಪ್ಪ, ಶಿವಕುಮಾರ್, ಮಹೇಶಣ್ಣ, ಪಿಡಿಒ ಅನಿಲ್, ಕಂದಾಯ ಅಧಿಕಾರಿ ಬಸಪ್ಪ, ರೇವಣ್ಣ, ಸಿದ್ದೇಶ್, ಮಂಜಣ್ಣ ಇನ್ನಿತರರಿದ್ದರು.
-12ಕೆಡಿವಿಜಿ35, 36.ಜೆಪಿಜಿ:
ಮಾಯಕೊಂಡ ಕ್ಷೇತ್ರದ ಆಲೂರು ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಭೂಮಿ ಪೂಜೆ ನೆರವೇರಿಸಿದರು.