ಅಥಣಿ ಪಟ್ಟಣದ ಸೌಂದರ್ಯೀಕರಣಕ್ಕೆ ಆದ್ಯತೆ

KannadaprabhaNewsNetwork |  
Published : Jun 24, 2025, 12:32 AM IST
ಜ್ಜಜಜ್ಜ್ | Kannada Prabha

ಸಾರಾಂಶ

ರಾಜ್ಯದ ಮೊಟ್ಟ ಮೊದಲ ಪುರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಥಣಿ ಪುರಸಭೆಯನ್ನು ರಾಜ್ಯದ ಮಾದರಿ ಪುರಸಭೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಸೌಂದರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ₹35 ಕೋಟಿ ಅನುದಾನದಲ್ಲಿ ಜೋಡಿ ಕೆರೆಗಳ ಅಭಿವೃದ್ಧಿ ಹಾಗೂ ಭಾಗಿರಥ ನಾಲಾ ಅಭಿವೃದ್ಧಿಪಡಿಸಲು ಶೀಘ್ರದಲ್ಲಿಯೇ ಮರು ಟೆಂಡರ್ ಪ್ರಸ್ತಾವನೆ ಸಲ್ಲಿಸಲಾಗುವುದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ರಾಜ್ಯದ ಮೊಟ್ಟ ಮೊದಲ ಪುರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಥಣಿ ಪುರಸಭೆಯನ್ನು ರಾಜ್ಯದ ಮಾದರಿ ಪುರಸಭೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಸೌಂದರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ₹35 ಕೋಟಿ ಅನುದಾನದಲ್ಲಿ ಜೋಡಿ ಕೆರೆಗಳ ಅಭಿವೃದ್ಧಿ ಹಾಗೂ ಭಾಗಿರಥ ನಾಲಾ ಅಭಿವೃದ್ಧಿಪಡಿಸಲು ಶೀಘ್ರದಲ್ಲಿಯೇ ಮರು ಟೆಂಡರ್ ಪ್ರಸ್ತಾವನೆ ಸಲ್ಲಿಸಲಾಗುವುದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಇಲ್ಲಿನ ಪುರಸಭೆ ಆವರಣದಲ್ಲಿ ಸೋಮವಾರ ಪುರಸಭೆ ಅನುದಾನದಲ್ಲಿ ₹55 ಲಕ್ಷಗಳ ಪುರಸಭೆ ಘನತ್ಯಾಜ್ಯ ನಿರ್ವಹಣೆಗಾಗಿ 1 ಅಟೋ ಟಿಪ್ಪರ, 2 ಟ್ರ್ಯಾಕ್ಟರ್, ಸ್ಕೀಡ್ ಲೋಡರ್‌ ವಾಹನಗಳ ಲೋಕಾರ್ಪಣೆ ಹಾಗೂ 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಆಯ್ಕೆಯಾದ 206 ಹೊಲಿಗೆಯಂತ್ರ ಫಲಾನುಭವಿಗಳು ಹಾಗೂ 53 ಜನ ಯುಪಿಎಸ್ ಬ್ಯಾಟರಿಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಮೊದಲ ಹಂತದ ಟೆಂಡರ್ ಪ್ರಕ್ರಿಯೆ ರದ್ದಾಗಿರುವ ಹಿನ್ನೆಲೆಯಲ್ಲಿ ಮರು ಟೆಂಡರ್ ಮಾಡಲಾಗುವುದು. ಪಟ್ಟಣ ಸೌಂದರ್ಯಕರಣ, ನೈರ್ಮಲ್ಯ ಹಾಗೂ ಸ್ವಚ್ಛತೆಯ ಮೂಲಕ ಹಲವು ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ರಾಜ್ಯದಲ್ಲಿದೆ. ಮಾದರಿ ಪುರಸಭೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಭರವಸೆ ನೀಡಿದರು.

ಬಡತನ ರೇಖೆಗಿಂತ ಕೆಳಗೆ ಇರುವ ಅರ್ಹ ಫಲಾನುಭವಿಗಳು ತಮ್ಮ ಜೀವನದಲ್ಲಿ ಸ್ವಾವಲಂಬನೆಯ ಬದುಕು ಬದುಕಲು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಹೊಲಿಗೆ ಯಂತ್ರ ಹಾಗೂ ವಿದ್ಯುತ್ ಅಭಾವ ಇದ್ದಾಗ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಅನ್ನುವ ಉದ್ದೇಶದಿಂದ ಯುಪಿಎಸ್ ಹಾಗೂ ಬ್ಯಾಟರಿಗಳನ್ನು ನೀಡಿ ಕತ್ತಲ ಬದುಕಿನಿಂದ ಬೆಳಕಿನಡೆಗೆ ಜೀವನ ಸಾಗಿಸಲು ಸಾದ್ಯವಾಗುತ್ತದೆ. ಪುರಸಭೆಯ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಪಟ್ಟಣದ ಸೌಂದರ್ಯಕರಣ ಮಾಡಲು ಪ್ರಮುಖ ರಸ್ತೆಗಳ ಬದಿಯಲ್ಲಿ ಹಾಗೂ ಡಿವೈಡರ್‌ಗಳ ಮಧ್ಯದಲ್ಲಿ ಒಂದೇ ರೀತಿಯ ಮರದ ಸಸಿಗಳನ್ನು ನೇಡುವ ಮೂಲಕ ಸುಂದರೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು. ಒಂದು ವರ್ಷದ ಅವಧಿಯಲ್ಲಿ 25 ಸಾವಿರ ಸಸಿಗಳನ್ನು ನೇಟ್ಟು ಅವುಗಳ ನಿರ್ವಹಣೆಗೆ ಅದ್ಯತೆ ನೀಡುವ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು. ಪುರಸಭೆ ಸದಸ್ಯರು ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಕೋರಿದರು.ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ಲ್ಯಾಂಡ್‌ ಡೆವಲಪರ್ಸ್‌ ನಿವೇಶನಗಳನ್ನು ಸರಿಯಾಗಿ ಅಭಿವೃದ್ಧಿಪಡಿಸದೇ ಸಾರ್ವಜನಿಕರಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಮೋಸವಾಗುತ್ತಿದೆ. ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸದೆ ಪುರಸಭೆಯಿಂದ ಎನ್‌ಒಸಿ ನೀಡದಂತೆ ಪುರಸಭೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲಿಲಾ ಬುಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಂಕಂಚಿ, ಮಾಜಿ ಪುರಸಭೆ ಅಧ್ಯಕ್ಷ ದಿಲೀಪ ಲೋಣಾರೆ, ಸದಸ್ಯರಾದ ದತ್ತಾ ವಾಸ್ಟರ್, ಮಲ್ಲು ಹುದ್ದಾರ, ಸಂತೋಷ ಸಾವಡಕರ, ರಾಜೂ ಗುಡೋಡಗಿ, ವಿಲೀನ ಯಳಮಲ್ಲೆ, ರಿಯಾಜ್ ಸನದಿ, ಉದಯ ಸೋಳಶಿ, ಮಲ್ಲಿಕಾರ್ಜುನ ಬುಟಾಳಿ, ಪ್ರಮೋದ ಬಿಳ್ಳೂರ, ಬಸವರಾಜ ನಾಯಿಕ, ಬಿ.ಎಂ.ಪಾಟೀಲ, ಶಾಂತಾ ಲೋಣಾರೆ, ಮೃಣಾಲಿನಿ ದೇಶಪಾಂಡೆ, ವಿದ್ಯಾ ಹಳದಮಳ, ಪುರಸಭೆ ನಾಮನಿರ್ದೇಶನ ಸದಸ್ಯರಾದ ರಾಮನಗೌಡ ಪಾಟೀಲ, ವಿನಾಯಕ ದೇಸಾಯಿ ಹಾಗೂ ಮುಖಂಡರಾದ ರವಿ ಬಡಕಂಬಿ, ಆಶೀಫ್ ತಾಂಬೋಳಿ, ಮಹಾಂತೇಶ ಬಾಡಗಿ, ಬಾಬು ಖೇಮಲಾಪೂರ, ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ