ಕನ್ನಡಪ್ರಭ ವಾರ್ತೆ ಕನಕಗಿರಿ
ಪಟ್ಟಣದ ಕೊಪ್ಪಳ ರಸ್ತೆಗೆ ಹೊಂದಿಕೊಂಡಿರುವ ಬಸವೇಶ್ವರ ವೃತ್ತದಲ್ಲಿ ರಾಜ್ಯ ಹೆದ್ದಾರಿ ೬೩ ಕನಕಗಿರಿಯಿಂದ ರಾಂಪುರದವರೆಗಿನ ೧೦ ಕಿ.ಮೀ ವರೆಗಿನ ₹ ೬ ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕಾರಟಗಿಯಿಂದ ಕನಕಗಿರಿಗೆ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಕಾಟಾಪುರ ಕೆರೆಯವರೆಗೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದ ಕನಕಗಿರಿಯವರೆಗಿನ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಕೆಕೆಆರ್ಡಿಬಿಯಡಿ ₹೧೦ ಕೋಟಿ ಅನುದಾನ ಮೀಸಲಿಡಲಾಗಿದೆ. ಕನಕಗಿರಿ ಪುರ ಪ್ರವೇಶದಲ್ಲಿ ಡಿವೈಡರ್, ಎರಡು ಕಡೆಗಳಲ್ಲಿ ಚರಂಡಿ ನಿರ್ಮಾಣ ಮಾಡಲಾಗುವುದು. ಮುಂದಿನ ತಿಂಗಳಲ್ಲಿ ₹೫೦ ಕೋಟಿ ವೆಚ್ಚದಲ್ಲಿ ಕ್ಷೇತ್ರದ ರಸ್ತೆಗಳ ನಿರ್ಮಾಣಕ್ಕೆ ಪೂಜೆ ಸಲ್ಲಿಸಲಾಗುವುದು.ಕಳೆದ ಎರಡು ವರ್ಷದಲ್ಲಿ ₹೨೦೦ ಕೋಟಿ ಅನುದಾನವನ್ನು ತಂದು ರಸ್ತೆ ಅಭಿವೃದ್ಧಿಪಡಿಸಿರುವುದಾಗಿ ತಿಳಿಸಿದರು.
ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ತಾಲೂಕು ವಕ್ತಾರ ಶರಣಪ್ಪ ಭತ್ತದ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಇತರರಿದ್ದರು. ಹೈಕಮಾಂಡ್ ಸೂಚನೆಯಂತೆ ನಡೆಯುತ್ತಿರುವೆ:
ನಮ್ಮದು ಕಾಂಗ್ರೆಸ್ ಒಂದೇ ಪಕ್ಷ. ನಮ್ಮಲ್ಲಿ ಅಧಿಕಾರಕ್ಕಾಗಿ ಮಾತನಾಡಿರಬಹುದು, ಆದರೆ ನಾನು ಕೇಂದ್ರದ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತಿದ್ದೇನೆ.ಶಿವರಾಜ ತಂಗಡಗಿ ಸಚಿವರಸ್ತೆ ಅಭಿವೃದ್ಧಿಗೆ ವಿಧಾನಸಭಾ ಕ್ಷೇತ್ರಕ್ಕೆ ₹25 ಕೋಟಿ:
ಹಾಸ್ಟೆಲ್ ಸಮಸ್ಯೆಯೂ ಇದ್ದು, ಬೇಡಿಕೆಗೆ ತಕ್ಕಷ್ಟು ಹಾಸ್ಟೆಲ್ ಇಲ್ಲವಾಗಿವೆ. ಹೀಗಾಗಿ, ಹಾಸ್ಟೆಲ್ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ 8 ಪಿಎಚ್ ಸಿ ಮತ್ತು 100 ಹಾಸಿಗೆಯ ಐದು ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.ಜಿಲ್ಲೆಯಲ್ಲಿ ರಂಗಮಂದಿರ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಉದ್ಘಾಟನೆ ಮಾಡಲಾವುದು. ಹಾಗೆಯೇ ಕಿಮ್ಸ್ ಆಸ್ಪತ್ರೆಯ ಕಟ್ಟಡ ಕಾಮಗಾರಿಯೂ ಪೂರ್ಣಗೊಂಡಿದ್ದು, ಉದ್ಘಾಟಿಸಲಾಗುವುದು ಎಂದರು.