ಹುಬ್ಬಳ್ಳಿ:
ಅವರು ಇಲ್ಲಿನ ರೈಲ್ವೆ ಕಾರ್ಯಾಗಾರದ ಸೆಮಿನಾರ್ ಹಾಲ್ನಲ್ಲಿ ಬುಧವಾರ ಹುಬ್ಬಳ್ಳಿ ರೈಲ್ವೆ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 40ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಮೃತ ಭಾರತ ಯೋಜನೆಯಡಿ ವಿಭಾಗದ ಹಲವು ರೈಲು ನಿಲ್ದಾಣಗಳನ್ನು ಸ್ಥಳೀಯತೆ, ಐತಿಹಾಸಿಕತೆ ಹಾಗೂ ಪ್ರವಾಸೋದ್ಯಮದ ವೈಶಿಷ್ಟ್ಯಗಳಿಗೆ ಅನುಗುಣವಾಗಿ ಪುನರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು..ಅಳ್ನಾವರ, ಬಾದಾಮಿ, ಕೊಪ್ಪಳ ಹಾಗೂ ಹೊಸಪೇಟೆ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಅದೇ ರೀತಿ ಹಂತ ಹಂತವಾಗಿ ವಾಸ್ಕೋ-ಡ-ಗಾಮಾ ಹಾಗೂ ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಸುವ್ಯವಸ್ಥಿತ ಮತ್ತು ಆಧುನಿಕ ಮಟ್ಟದ ಉನ್ನತೀಕರಣ ಕಾಮಗಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಡಿಆರ್ಯುಸಿಸಿ ಸದಸ್ಯ ಚಂದ್ರಕಾಂತ ಗವಾಸ್ (ಗೋವಾ) ಮಾತನಾಡಿ, ರೈಲುಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿ, ಈ ಬಗ್ಗೆ ಇಲಾಖೆ ಕಠಿಣ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆ, ನೋಂದಾಯಿತ ಪ್ರಯಾಣಿಕರ ಸಂಘಗಳು, ಜನಪ್ರತಿನಿಧಿಗಳಿಂದ ನೇಮಕಗೊಂಡವರು, ವಾಣಿಜ್ಯೋದ್ಯಮಿಗಳು, ವ್ಯಾಪಾರಿ ಸಂಘಗಳು ಹಾಗೂ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಡಿಆರ್ಯುಸಿಸಿ ಸದಸ್ಯರಾದ ಕಿರಣ ದೀನನಾಥ ನಾಯ್ಕ, ಆರ್. ಗೋಪಾಲ ಕೃಷ್ಣ, ವಿ.ಜಿ. ಹಿರೇಗೌಡರ, ಡಿ.ಆರ್. ರಾಟಿ, ಚನ್ನವೀರ ಮುಂಗುರವಾಡಿ, ಗಿರಿಧರ ಸೊಂತ, ಕೆ.ಎಂ. ಕೊಟ್ರೇಶ, ಚಂದ್ರಕಾಂತ ಗವಾಸ್, ಅಗಸ್ಟೊ ಕೋಸ್ಟಾ, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರಾದ ಟಿ.ವಿ. ಭೂಷಣ, ಪ್ರೇಮಚಂದ್ರ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳಿದ್ದರು.