ಸಂಶೋಧನೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ಇರಲಿ

KannadaprabhaNewsNetwork |  
Published : Nov 11, 2024, 01:00 AM IST
ತುಮಕೂರು ವಿವಿಯಲ್ಲಿ‌ರಾಷ್ಟ್ರೀಯ ಕಾರ್ಯಗಾರಕ್ಕೆ ಚಾಲನೆ | Kannada Prabha

ಸಾರಾಂಶ

ಸಂಶೋಧನೆಯಲ್ಲಿ ಗುಣಮಟ್ಟದ ಕೊರತೆಯಿದೆ. ಸಂಶೋಧನಾ ಗುಣಮಟ್ಟವನ್ನು ಹೆಚ್ಚಿಸುವುದು ವಿಶ್ವವಿದ್ಯಾನಿಲಯಗಳ ಆದ್ಯತೆಯಾಗಬೇಕು

ಕನ್ನಡಪ್ರಭ ವಾರ್ತೆ ತುಮಕೂರು

ಸಂಶೋಧನೆಯಲ್ಲಿ ಗುಣಮಟ್ಟದ ಕೊರತೆಯಿದೆ. ಸಂಶೋಧನಾ ಗುಣಮಟ್ಟವನ್ನು ಹೆಚ್ಚಿಸುವುದು ವಿಶ್ವವಿದ್ಯಾನಿಲಯಗಳ ಆದ್ಯತೆಯಾಗಬೇಕು ಎಂದು ಶಿವಮೊಗ್ಗ ಕುವೆಂಪು ವಿವಿಯ ಅನ್ವಯಿಕ ಭೂ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಸೈಯದ್ ಅಶ್ಫಾಕ್ ಅಹಮದ್ ಅಭಿಪ್ರಾಯಪಟ್ಟರು.

ತುಮಕೂರು ವಿವಿಯ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿಗಳು ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಶನಿವಾರ ಆಯೋಜಿಸಿದ್ದ ‘ಶೈಕ್ಷಣಿಕ ವ್ಯಕ್ತಿ ವಿವರಗಳನ್ನು ಬಳಸುವ ಮೂಲಕ ಸಂಶೋಧನಾ ಗೋಚರತೆಯನ್ನು ಹೆಚ್ಚಿಸುವಿಕೆ’ ಕುರಿತ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಉನ್ನತ ಸಂಶೋಧನಾ ನಿಯತಕಾಲಿಕೆಗಳಲ್ಲಿ ಪ್ರಬಂಧಗಳನ್ನು ಪ್ರಕಟಿಸುವುದು ಆಯಾ ಸಂಶೋಧನಾರ್ಥಿಯ ವಿವೇಚನೆಗೆ ಬಿಟ್ಟದ್ದು ಎಂದು ಯುಜಿಸಿಯು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹಿಂದೆ ಕಡ್ಡಾಯವಾಗಿ ಎರಡು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವ ಮಾರ್ಗಸೂಚಿಯಿತ್ತು. ಹೊಸ ನಿಯಮಗಳು ಸಂಶೋಧನೆಯ ಮಟ್ಟವನ್ನು ಎಲ್ಲಿಗೆ ಕೊಂಡೊಯ್ಯುತ್ತಿವೆ ಎನ್ನವುದೇ ಯಕ್ಷ ಪ್ರಶ್ನೆಯಾಗಿದೆ ಎಂದರು.

ಧನ ಸಹಾಯ ಆಯೋಗಗಳು ಹಾಗೂ ಉದ್ಯೋಗ ಸಂಸ್ಥೆಗಳು ಬಯಸುವುದು ಗುಣಮಟ್ಟದ ಸಂಶೋಧನಾ ಪ್ರಬಂಧಗಳನ್ನು. ಉನ್ನತ ಸಂಶೋಧನಾ ನಿಯತಕಾಲಿಕಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವುದರಿಂದ ಮಾತ್ರ ಪಿಎಚ್‌ಡಿಗೆ ಬೆಲೆ ಬರುವುದು. ಯುಜಿಸಿಯಿಂದ ಮಾನ್ಯತೆ ಪಡೆದ ನಿಯತಕಾಲಿಕೆಗಳಲ್ಲಷ್ಟೇ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕು. ಹಣ ಪಡೆಯುವ ನಕಲಿ ನಿಯತಕಾಲಿಕೆಗಳನ್ನು ನಂಬಬಾರದು ಎಂದು ತಿಳಿಸಿದರು.

ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯಲು ಹಾಗೂ ನ್ಯಾಕ್ ಮಾನ್ಯತೆಯಲ್ಲಿ ‘ಎ+’ ಶ್ರೇಣಿ ಗಳಿಸಲು ಗುಣಮಟ್ಟದ ಸಂಶೋಧನೆಗಳನ್ನು ಕೈಗೊಳ್ಳಬೇಕು. ಜಾಗತಿಕ ಮಟ್ಟದ ಸಂಶೋಧನೆಗಳಾಗಬೇಕು. ಸಂಶೋಧನೆಗಳೇ ವಿಶ್ವವಿದ್ಯಾನಿಲಯಗಳ ಭವಿಷ್ಯ. ಇದನ್ನು ಸಾಧಿಸಲು ಸ್ವಯಂಶಿಸ್ತು ಬಹಳ ಮುಖ್ಯ ಎಂದು ಹೇಳಿದರು.

ಕುಲಸಚಿವೆ ನಾಹಿದಾ ಜಮ್ ಜಮ್, ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿಗಳ ನಿರ್ದೇಶಕ ಪ್ರೊ. ಬಿ. ಟಿ. ಸಂಪತ್ ಕುಮಾರ್, ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕ ಪ್ರೊ. ರಮೇಶ್ ಬಿ. ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ರೂಪೇಶ್ ಕುಮಾರ್ ಎ. ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ