ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ
ಶನಿವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಡಾಲ್ಟಿ ಡಿಜೆಗಳಂತಹ ಅತಿಯಾದ ಶಬ್ದ ಉಂಟುಮಾಡುವ ಧ್ವನಿವರ್ಧಕ ನಿಷೇಧಿಸಿದ್ದು, ಕಡಿಮೆ ಶಬ್ದವನ್ನುಂಟು ಮಾಡುವ ಧ್ವನಿವರ್ಧಕ ಬಳಕೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಪೊಲೀಸರು ಕೊಡುವ ಸಲಹೆ ಸೂಚನೆಗಳನ್ನು ಗಣೇಶ ಮಂಡಳಿಯವರು ಪಾಲಿಸಬೇಕು. ಅದೇ ರೀತಿ ಸಾರ್ವಜನಿಕರ ಹಿತದೃಷ್ಟಿಯಿಂದ ಗಣೇಶ ಪ್ರತಿಷ್ಠಾಪನೆಗೆ ಪುರಸಭೆ, ಹೆಸ್ಕಾಂ, ಅಗ್ನಿಶಾಮಕ, ಪೊಲೀಸ್ ಇಲಾಖೆ ಅನುಮತಿ ಪಡೆಯಲು ಒಂದೇ ಕಡೆ ಅರ್ಜಿ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ಒಟ್ಟು ೩೦೦ಕ್ಕಿಂತಲೂ ಹೆಚ್ಚು ಸಾರ್ವಜನಿಕ ಗಣೇಶ ಸ್ಥಾಪನೆ ಆಗಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಪಿಒಪಿ ಗಣೇಶ ಮೂರ್ತಿಯನ್ನು ನಿಷೇಧಿಸಲಾಗಿದೆ. ಗಣೇಶ ಮಂಡಳಿಯವರು ಕಡ್ಡಾಯವಾಗಿ ಮಣ್ಣಿಂದ ಮಾಡಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಕೂಡಿಸುವುದಕ್ಕೆ ಆದ್ಯತೆ ನೀಡುವಂತೆ ತಿಳಿಸಿದರು.ಪುರಸಭೆ ಅಧಿಕಾರಿಗಳ ಜೊತೆಗೆ ಮಾತನಾಡಿ ಕೆಲವು ಕಡೆ ಗಣೇಶ ವಿಸರ್ಜನೆಗೆ ಹೊಂಡಗಳನ್ನ ನಿರ್ಮಿಸಲು ಕ್ರಮ ಕೈಗೊಳ್ಳುತ್ತೇವೆ. ಡಿಜೆದಿಂದ ಅರೋಗ್ಯ ಹಾನಿಕಾರಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಿ, ವಾಟ್ಸಪ್ ಹಾಗೂ ಸಾಮಾಜಿಕ ಜಾಲತಾಣದಲ್ಲಿನ ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಶಾಂತಿ ಕದಡುವವರ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಿದರು.