ಧಾರವಾಡ:
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಬರ ಪರಿಸ್ಥಿತಿ, ಕುಡಿಯುವ ನೀರು, ಮೇವು ಹಾಗೂ ಬರಪರಿಹಾರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದರೂ 52 ಗ್ರಾಮಗಳಲ್ಲಿ 81 ಖಾಸಗಿ ಒಡೆತನದ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕಲಘಟಗಿಯ 26 ಗ್ರಾಮಗಳಿಗೆ 46, ಧಾರವಾಡದಲ್ಲಿ 18 ಗ್ರಾಮಗಳಿಗೆ 26 ಹಾಗೂ ಹುಬ್ಬಳ್ಳಿಯ ಐದು ಗ್ರಾಮಗಳಿಗೆ 5 ಕೊಳವೆಬಾವಿಗಳಿಂದ ನೀರು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಮಳೆ ಆಗುತ್ತಿರುವುದರಿಂದ ಎಲ್ಲಿಯಾದರೂ ಜಾನುವಾರು ಅಥವಾ ಮಳೆಹಾನಿಯಾದಲ್ಲಿ ತಹಸೀಲ್ದಾರ್ ಖುದ್ದಾಗಿ ಭೇಟಿ ನೀಡಬೇಕು. ಪರಿಸ್ಥಿತಿ ಪರಿಶೀಲಿಸಿ ತಕ್ಷಣವೇ ಪರಿಹಾರ ನೀಡುವಂತೆ ಸೂಚಿಸಿದರು. ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೊಳ್ಳಿ ಗ್ರಾಮದ ನೀರಿನ ಟ್ಯಾಂಕ್ ಶಿಥಿಲಾವಸ್ಥೆಯಲ್ಲಿದ್ದು ತಹಸೀಲ್ದಾರ್ ತಕ್ಷಣ ಪರಿಶೀಲಿಸುವಂತೆ ತಿಳಿಸಿದರು. ಅಲ್ಲದೇ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ನೀರಿನ ಟ್ಯಾಂಕ್ನಿಂದ ಸಮರ್ಪಕವಾಗಿ ನೀರು ಪೂರೈಕೆಯಾಗದ ಕುರಿತು ಅಹವಾಲು ಬಂದಿದ್ದು ಧಾರವಾಡ ತಹಸೀಲ್ದಾರ್ ತಕ್ಷಣವೇ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಜಂಟಿ ನಿರ್ದೇಶಕ ಕಿರಣಕುಮಾರ ಎಂ. ಇದ್ದರು.