ಖಾಸಗಿ ಬಸ್ - ಆಟೋ ನಡುವೆ ಅಪಘಾತ: ಇಬ್ಬರ ಸಾವು

KannadaprabhaNewsNetwork |  
Published : Sep 15, 2024, 01:53 AM IST

ಸಾರಾಂಶ

ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಆಟೋದಲ್ಲಿದ್ದ ನಲ್ಲೂರು ನಿವಾಸಿ ರಾಘವೇಂದ್ರ (32) ಸ್ಥಳದಲ್ಲೇ ಮೃತಪಟ್ಟಿದ್ದರೆ, ಹಿಂಬದಿ ಕುಳಿತಿದ್ದ ಮಲ್ಲೇದೇವರಹಳ್ಳಿ ನಿವಾಸಿ ಚಂದ್ರಶೇಖರ್ (35) ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಮೂಡಿಗೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಿಕ್ಕಮಗಳೂರಿನಿಂದ ನಲ್ಲೂರು ಕಡೆಗೆ ಸಂಚರಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸುತ್ತಿದ್ದಾಗ ದಾರಿ ಮಧ್ಯದಲ್ಲೇ ಚಂದ್ರಶೇಖರ್‌ ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ