ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 25ಕ್ಕೂ ಹೆಚ್ಚು ಜನರಿಗೆ ಗಾಯ

KannadaprabhaNewsNetwork |  
Published : Jul 20, 2025, 01:19 AM IST
ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ಖಾಸಗಿ ಬಸ್‌ ಪಲ್ಟಿಯಾಗಿರುವುದು. | Kannada Prabha

ಸಾರಾಂಶ

ಕೊಟ್ಟಿಗೆಹಾರಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ನಡೆದಿದ್ದು, ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕನ್ನಡಪ್ರಭ ವಾರ್ತೆ, ಕೊಟ್ಟಿಗೆಹಾರ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ನಡೆದಿದ್ದು, ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕಾಫಿನಾಡಲ್ಲಿ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಗೊಂಡಿದ್ದು, ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರ ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ, ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರ ಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ ಯುವಕ, ಯುವತಿಯರು. ವೀಕ್ಎಂಡ್ ಹಿನ್ನೆಲೆಯಲ್ಲಿ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಅಭಿ, ವಿನಯ್, ಜಲಿಲ್, ವರುಣ್ ಸೇರಿ ದಂತೆ ಸ್ಥಳಿ ಯುವಕರು ಬಣಕಲ್ ಕೃಷ್ಣ ಆಸ್ಪತ್ರೆಗೆ ಹಾಗೂ ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

19 ಕೆಸಿಕೆಎಂ 3ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ಶನಿವಾರ ಖಾಸಗಿ ಬಸ್‌ ಪಲ್ಟಿಯಾಗಿರುವುದು.

-----------------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ