ಕನ್ನಡಪ್ರಭ ವಾರ್ತೆ ತಾಳಿಕೋಟೆ
ಶ್ರೀಮಠದ ಬಾಲಶಿವಯೋಗಿ ಸಿದ್ದಲಿಂಗ ದೇವರ ಅಪೇಕ್ಷೆಯ ಮೇರೆಗೆ ಬುಧವಾರ ರಾತ್ರಿಯಿಂದಲೇ ಜಿಲೇಬಿ ತಯಾರಿಕೆಯ ಕಾರ್ಯ ಭರದಿಂದ ಸಾಗಿತ್ತು ಸುಮಾರು ನೂರಾರು ಜನ ಭಕ್ತರು ಜಿಲೇಬಿ, ಬೂಂದೆ, ಚಿತ್ರನ್ನದ ಪ್ರಸಾದವು ಬೆಳಗ್ಗೆ ೯ ಗಂಟೆಯಿಂದ ಭಕ್ತಸಮೂಹಕ್ಕೆ ಯಾವುದೇ ರೀತಿಯಿಂದ ಪ್ರಸಾದಕ್ಕೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡರು. ಪ್ರಸಾದ ಸ್ವೀಕರಿಸುವ ಸಮಯದಲ್ಲಿ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ಇಂದು ೧೫ ಕ್ವಿಂಟಲ್ ಹುಗ್ಗಿ ಪ್ರಸಾದ:
ಇಂದು ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮ
ಶ್ರೀಖಾಸ್ಗತ ಮಹಾ ಶಿವಯೋಗಿಗಳ ಜಾತ್ರೆ ಹಾಗೂ ರಥೋತ್ಸವ ಅಂಗವಾಗಿ ಗುರುವಾರ ನಸುಕಿನ ಜಾವ ೫.೩೦ಕ್ಕೆ ಅಸಂಖ್ಯಾತ ಭಕ್ತ ಸಮೂಹದ ಸಮ್ಮುಖದಲ್ಲಿ ಗೋಪಾಲ ಕಾವಲಿ(ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮವು ಭಕ್ತಿ ಭಾವದೊಂದಿಗೆ ಜರುಗಲಿದೆ. ೯ ದಿನಗಳ ಕಾಲ ನಡೆದು ಬಂದ ಸಪ್ತ ಭಜನಾ ಕಾರ್ಯಕ್ರಮವು ಗೋಪಾಲಕಾವಲಿ (ಮೊಸರುಗಡಿಗೆ) ಒಡೆಯುವದರ ಮೂಲಕ ಮಂಗಲಗೊಳ್ಳಲಿದೆ. ಶ್ರೀಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಘನ ಅಧ್ಯಕ್ಷತೆಯಲ್ಲಿ ಜರುಗಲಿರುವ ಈ ಗೋಪಾಲ ಕಾವಲಿ ಒಡೆಯುವ ಮುಂಚೆ ಭವ್ಯ ಪ್ರಭಾತ ಪೇರಿಯೊಂದಿಗೆ ಧ್ವಜದ ಮೆರವಣಿಗೆ ನಡೆಯುವುದು.