ಮಾಕುಟ್ಟ: ಹೊತ್ತಿ ಉರಿದ ಖಾಸಗಿ ಪ್ರವಾಸಿ ಬಸ್, ಸಿಬ್ಬಂದಿ ಪಾರು

KannadaprabhaNewsNetwork |  
Published : Dec 16, 2025, 02:45 AM IST
ಬಸ್ | Kannada Prabha

ಸಾರಾಂಶ

ಆಕಸ್ಮಿಕವಾಗಿ ಬೆಂಕಿ ಹಿಡಿದು ಬಸ್‌ ಹೊತ್ತಿ ಉರಿದ ಘಟನೆ ವಿರಾಜಪೇಟೆ ತಾಲೂಕು ಮಾಕುಟ್ಟ ರಸ್ತೆಯ ಮಗಡಿಪಾರೆ ಅಂಜನೇಯ ದೇವಸ್ಥಾನದ ಸಮೀಪ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಆಕಸ್ಮಿಕವಾಗಿ ಬೆಂಕಿ ಹಿಡಿದು ಬಸ್ ಹೊತ್ತಿ ಉರಿದ ಘಟನೆ ವಿರಾಜಪೇಟೆ ತಾಲೂಕು ಮಾಕುಟ್ಟ ರಸ್ತೆಯ ಮಗಡಿಪಾರೆ ಆಂಜನೇಯ ದೇವಸ್ಥಾನದ ಸಮೀಪ ಸಂಭವಿಸಿದೆ.

ಕೇರಳ ನೋಂದಣಿ ಹೊಂದಿರುವ ಖಾಸಗಿ ಬಸ್ ಪ್ರವಾಸಿ ಬಸ್ ಆಗಿದ್ದು ವಿರಾಜಪೇಟೆಯಲ್ಲಿ ಸೋಮವಾರ ಮುಂಜಾನೆ ಪ್ರವಾಸಿಗರನ್ನು ಇಳಿಸಿ, ವಾಪಸು ಕೇರಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಬಸ್ ನಲ್ಲಿ ಚಾಲಕ ಹಾಗೂ ನಿರ್ವಾಹಕರು ಮಾತ್ರ ಇದ್ದಿದ್ದು ಈರ್ವರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಗೆ ಬೆಂಕಿ ಹಿಡಿದರ ಪರಿಣಾಮ ಮಾಕುಟ್ಟ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್ ಆಗಿತ್ತು.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಬಸ್ ಸಂಪೂರ್ಣವಾಗಿ ಭಸ್ಮವಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

-------------------------------------------------------

ಕಾರು ಅಪಘಾತ: ವ್ಯಕ್ತಿ ಗಂಭೀರ

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಡಿಕೇರಿ ತಾಲೂಕಿನ ಹಾಕತ್ತೂರಿನಲ್ಲಿ ಸಂಭವಿಸಿದೆ. ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದ ವೇಣುಗೋಪಾಲ್ ಎಂಬುವರಿಗೆ ಸೇರಿದ ಕಾರು, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿತ್ವ ರೂಪಿಸುವುದೇ ಮನೆಗೊಂದು ಗ್ರಂಥಾಲಯದ ಉದ್ದೇಶ-ಡಾ. ಮಾನಸ
ಲೋಕಾ ದಾಳಿಗೆ ಹೆದರಿ ಬಾತ್‌ರೂಂನಲ್ಲಿ ಹಣ ಪ್ಲಶ್‌ ಮಾಡಿದ ಅಧಿಕಾರಿ