ಹಾವೇರಿ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬಸ್ಗಳನ್ನು ಸರಿಯಾಗಿ ಕಾರ್ಯಾಚರಣೆ ಮಾಡುವಂತೆ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು ಸೂಚನೆ ನೀಡಿದರು. ಇಲ್ಲಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ಅವರು, ಸಾರಿಗೆ ಬಸ್ಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ವಾಹನಗಳ ದಟ್ಟಣೆ ಹಾಗೂ ಪ್ರಯಾಣಿಕರ ದಟ್ಟಣೆಯನ್ನು ಸುವ್ಯವಸ್ಥಿತವಾಗಿ ನಿಯಂತ್ರಿಸಲು ಅಧ್ಯಯನ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯ ಸಂಚಾರ ವ್ಯವಸ್ಥಾಪಕರು, ಮುಖ್ಯ ಕಾಮಗಾರಿ ಅಭಿಯಂತರರು ಹಾಗೂ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.ನಂತರ ಬ್ಯಾಡಗಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ, ಬ್ಯಾಡಗಿ ಬಸ್ ನಿಲ್ದಾಣದ ಸ್ವಚ್ಚತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಸ್ ನಿಲ್ದಾಣದ ಸ್ವಚ್ಚತೆ ಬಗ್ಗೆ, ಅನುಸೂಚಿಗಳ ಹೆಚ್ಚಳ ಬಗ್ಗೆ ಹಾಗೂ ಕಾರ್ಯಾಚರಣೆ ಸುಧಾರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಘಟಕದ ಸಿಬ್ಬಂದಿ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಕೇಂದ್ರ ಕಚೇರಿಯ ವಿವೇಕಾನಂದ ವಿಶ್ವಜ್ಞ, ಮುಖ್ಯ ಸಂಚಾರ ವ್ಯವಸ್ಥಾಪಕ ದಿವಾಕರ್ ಯರಗುಪ್ಪ, ಮುಖ್ಯ ಕಾಮಗಾರಿ ಅಭಿಯಂತರರು ಹಾಗೂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ ಜಿ., ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲ್, ವಿಭಾಗೀಯ ತಾಂತ್ರಿಕ ಶಿಲ್ಪಿ ಕೆ.ಆರ್. ನಾಯಕ್ ಮತ್ತು ವಿಭಾಗದ ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.ಧರ್ಮಜಾಗೃತಿ ಮೂಡಿಸಿದ ಶಂಕರಾಚಾರ್ಯರು
ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ತಹಸೀಲ್ದಾರ್ ಫಿರೋಜ ಷಾ ಸೋಮನಕಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ವಿನಾಯಕ ಹುದ್ದಾರ, ಸಮಾಜದ ಮುಖಂಡರಾದ ಉಮೇಶ ರಟ್ಟಿಹಳ್ಳಿ, ಬಾಬುರಾವ್ ಹುದ್ದಾರ, ಸಂಧ್ಯಾರಾಣಿ ದೇಶಪಾಂಡೆ, ಗೋಪಾಲ ದೇಶಪಾಂಡೆ, ಶ್ರೀನಿವಾಸ ಕುಲಕರ್ಣಿ, ಪವನ್ ಗೋಸಾವಿ, ಸುಪ್ರಭಾ ಗೋಸಾವಿ ಹಾಗೂ ಸಮಾಜದ ಮುಖಂಡರು ಇದ್ದರು.