ಗೋಕರ್ಣ: ಶಾಲಾ ಕಾಲೇಜು ಹಂತದಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ ತಡೆಗೆ ಜಾಗೃತಿ ಮೂಡಿಸಲು ಶಿಕ್ಷಕರ ಜವಾಬ್ಧಾರಿ ಜೊತೆ ಪೊಲೀಸ್ ಇಲಾಖೆ ಹೆಚ್ಚಿನ ನಿಗಾವಹಿಸ ಬೇಕು ಈ ಕಾರ್ಯಕ್ಕೆ ನಾನು ಜೊತೆಯಾಗುತ್ತೇನೆ ಇದು ಪ್ರವಾಸಿ ತಾಣ ಗೋಕರ್ಣದಿಂದಲೇ ಪ್ರಾರಂಭವಾಗಲಿ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಇತ್ತೀಚಿಗೆ ಮಾದಕ ವಸ್ತುಗಳ ಬಳಕೆ ಯುವಜನರಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿ ವಿಷಯವಾಗಿದ್ದು, ಇದನ್ನ ತಡೆಯಲು ಎಲ್ಲರೂ ಒಂದಾಗ ಬೇಕು ಎಂದ ಅವರು, ಮೊಬೈಲ ಬಳಕೆಯೂ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿದ್ದು, ಮಾದಕ ವಸ್ತು, ಮೊಬೈಲ್ ಬಳಕೆ ಎರಡು ನಿಷೇಧವಾಗಬೇಕು ಎಂದರು.
ವಿದ್ಯಾ ಸಂಸ್ಥೆಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ ಎಂದು ಪ್ರಶಂಸಿಸಿದರು.ನಿವೃತ ಪೊಲೀಸ್ ವರಿಷ್ಠಾಧಿಕಾರಿ ಪ್ರಮೋದ ರಾವ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ಆಗುವ ಪರಿಣಾಮಗಳನ್ನ ವಿವರಿಸಿ, ಪ್ರವಾಸಿತಾಣದಲ್ಲಿ ತಮ್ಮ ಅಧಿಕಾರ ಅವಧಿಯಲ್ಲಿ ತೆಗೆದುಕೊಂಡ ಕ್ರಮಗಳನ್ನ ವಿವರಿಸಿದರು.
ಡಿ.ವೈ.ಎಸ.ಪಿ. ಮಹೇಶ ಎಂ. ಕೆ. ಮಾತನಾಡಿ ಪ್ರವಾಸಿ ತಾಣದಲ್ಲಿ ಈಗಾಗಲೇ ೨೦ಕ್ಕೂ ಹೆಚ್ಚು ಮಾದಕ ವಸ್ತುಗಳ ಬಳಕೆಯ ಕುರಿತು ಪ್ರಕರಣಗಳನ್ನ ದಾಖಲಿಸಿ ಕ್ರಮತೆಗೆದುಕೊಂಡಿರುವುದನ್ನ ವಿವರಿಸಿ,ಇಂತಹ ಚಟುವಟಿಕೆಯನ್ನ ನಿಯಂತ್ರಿಸಲಾಗುತ್ತಿದೆ ಎಂದರು. ಅಲ್ಲದೇ ಮಾದಕ ದ್ರವ್ಯಗಳ ದುಷ್ಪರಿಣಾಮದ ಬಗ್ಗೆ ತಿಳಿಸಿ ವಿದ್ಯಾರ್ಥಿ ಜೀವನದಿಂಲೇ ಈ ಬಗ್ಗೆ ಜಾಗೃತವಹಿಸ ಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆನರಾ ಶಿಕ್ಷಣ ಪ್ರಸಾರಕ ಮಂಡಳಿಯ ಕಾರ್ಯದರ್ಶಿ ಜಿ.ಎನ್. ನಾಯಕ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳನ್ನ ವಿವರಿಸಿದರು.
ವೇದಿಕೆಯಲ್ಲಿ ಗ್ರಾ. ಪಂ. ಅಧ್ಯಕ್ಷೆ ಸುಮನಾ ಗೌಡ, ಕಾಲೇಜಿನ ಪ್ರಾಚಾರ್ಯ ಎಸ.ಸಿ.ನಾಯ್ಕ, ಪೌಢಶಾಲಾ ಮುಖ್ಯಾಧ್ಯಾಪಕ ಸಿ.ಜಿ. ನಾಯಕ ದೊರೆ, ಪಿ.ಎಸ್.ಐ. ಖಾದರ್ ಬಾಷಾ. ಶಶಿಧರ ಮಹಾಬಲೇಶ್ವರ ಕೋ-ಆಫ್ ರೇಟಿವ್ ಬ್ಯಾಂಕ್ ಅಧ್ಯಕ್ಷ ಮೋಹನ ನಾಯಕ, ಜಿ.ಪಂ. ಮಾಜಿ ಸದಸ್ಯ ಪ್ರದೀಪ ನಾಯಕ ದೇವರಭಾವಿ,ತಾ. ಪಂ. ಮಾಜಿ ಸದಸ್ಯ ಮಹೇಶ ಶೆಟ್ಟಿ, ನಾಡುಮಾಸ್ಕೇರಿ ಗ್ರಾ. ಪಂ. ಮಾಜಿ ಅಧ್ಯಕ್ಷ ಹನೀಫ್ ಸಾಬ್ ಮತ್ತಿತತರು ಉಪಸ್ಥಿತರಿದ್ದರು. ಉಪನ್ಯಾಸಕಿ ಪಲ್ಲವಿ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿನಿಯರಿಂದ ಪ್ರಾರ್ಥನೆ ನಡೆಯಿತು.