ರಾಮನಗರ: ಸರ್ಕಾರಿ ಅಧಿಕಾರಿಗಳು ಕಾನೂನಿನ ಇತಿಮಿತಿಯಲ್ಲಿ ಕೆಲಸ ಮಾಡಬೇಕು. ಅವರನ್ನು ದ್ವೇಷದಿಂದ ಕಾಣಬಾರದು. ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಾಡುವ ಕೆಟ್ಟ ಚಾಳಿಯನ್ನು ಸಂಘಟನೆಗಳು ಬಿಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.
ಸಮುದಾಯದ ಏಳಿಗೆಗಾಗಿ ಎಲ್ಲರು ಸಂಘಟಿತರಾಗಬೇಕು. ಒಗ್ಗಟ್ಟಾಗಿ ಇರಬೇಕು. ಆದರೆ, ಅನೇಕರು ಸ್ವಾರ್ಥಕ್ಕಾಗಿ ಸಂಘಟನೆ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಅದೆಲ್ಲವನ್ನೂ ಬಿಟ್ಟು ಸಮಾಜಕ್ಕಾಗಿ ಹಾಗೂ ಸಮಾಜದ ತಾಯಂದಿರಿಗಾಗಿ ಹೋರಾಟ ಮಾಡಬೇಕು. ಈ ಸಮಾಜದಲ್ಲಿ ಉಳಿದು ಸಮಾನತೆ ತಂದುಕೊಂಡು ಬದುಕಬೇಕಾದರೆ, ಎಲ್ಲ ರೀತಿಯಲ್ಲಿ ಅರ್ಹತೆ ಬೇಕಾದರೆ, ಹಕ್ಕು ಪಡೆಯಬೇಕಾದರೆ ಹೋರಾಟ ಮಾಡಬೇಕಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಕಣ್ಮನ ಸೆಳೆದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆರಾಮನಗರ: ಆನೆ ಮೇಲೆ ಹಾಗೂ ಬೆಳ್ಳಿ ರಥದಲ್ಲಿ ಸಂವಿಧಾನ ಶಿಲ್ಬಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಇರಿಸಿ ಭವ್ಯವಾದ ಮೆರವಣಿಗೆ ನಡೆಸಲಾಯಿತು. ನಗರದ ಮಿನಿ ವಿಧಾನಸೌಧ ಬಳಿ ಆನೆ ಮೇಲೆ ಹಾಗೂ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಿ ಜೂನಿಯರ್ ಕಾಲೇಜು ಮೈದಾನದವರೆಗೆ ಮೆರವಣಿಗೆ ಮಾಡಲಾಯಿತು.
ಮಿನಿ ವಿಧಾನಸೌಧದಿಂದ ಆರಂಭವಾದ ಮೆರವಣಿಗೆಯೂ ಮೈಸೂರು - ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಜೂನಿಯರ್ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆ ಉದ್ಧಕ್ಕೂ ನೂರಾರು ಜನರು ಸಾಗಿ ಬಂದರು.