ಸುಹಾಸ್ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು.
ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸುಹಾಸ್ ಶೆಟ್ಟಿ ಹತ್ಯೆ ವ್ಯವಸ್ಥಿತ ಕೊಲೆಯಾಗಿದೆ. ಆರೋಪಿಗಳನ್ನು ಬಂಧಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಬಜರಂಗದಳದ ಕಾರ್ಯಕರ್ತ ಅಕ್ಷಯ್ ಮಾತನಾಡಿ, ಸುಹಾಸ್ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಹಿಂದೂ ಕಾರ್ಯಕರ್ತರ ಮೇಲೆ ಇತ್ತೀಚೆಗೆ ಹಲ್ಲೆ, ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿಯುತ್ತಿದೆ ಎಂಬ ಅನುಮಾನ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹರ್ಷಿ ಭಗೀರಥರ ಜಯತಿಯನ್ನು ಆಚರಿಸಲಾಯಿತು.
ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ ಸೇರಿದಂತೆ ಸಮುದಾಯದ ಮುಖಂಡರು ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿದರು. ಈ ವೇಳೆ ಶ್ರೀಭಗೀರಥ ಉಪ್ಪಾರ ಸಂಘದ ತಾಲೂಕು ಅಧ್ಯಕ್ಷ ಸೋಮು, ಮೇಸ್ತ್ರಿ ಮಹದೇವು, ಬಸವರಾಜು, ಕುಮಾರ, ಮಹದೇವು, ಬೆಳಗೊಳ ಪುನೀತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.