ಸುಹಾಸ್‌ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಹಿಂದೂಪರ ಸಂಘಟನೆಗಳ ಪಂಜಿನ ಮೆರವಣಿಗೆ

KannadaprabhaNewsNetwork |  
Published : May 08, 2025, 12:34 AM IST
ಬ್ಯಾಡಗಿಯಲ್ಲಿ ಹಿಂದೂಪರ ಸಂಘಟನೆಗಳ ಕಾರ‍್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಜಿಹಾದಿ ಮನಸ್ಥಿತಿಗಳು ಹೆಚ್ಚಾಗುತ್ತಿದೆ. ಇದರಿಂದ ಹಿಂದೂ ಕಾರ‍್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಚಂದ್ರಶೇಖರ ಗದಗಕರ ಆಗ್ರಹಿಸಿದರು.

ಬ್ಯಾಡಗಿ: ಹಿಂದೂ ಕಾರ್ಯಕರ್ತ ಸುಹಾಸ್‌ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ‍್ಯಕರ್ತರು ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು.ಪಟ್ಟಣದ ಸುಭಾಸ್ ವೃತ್ತದಿಂದ ಅರಂಭವಾದ ಮೆರವಣಿಗೆ ಹಳೇ ಪುರಸಭೆ ಎದುರು ಸಂಪನ್ನಗೊಂಡಿತು. ದಾರಿಯುದ್ದಕ್ಕೂ ಜಿಹಾದಿ ಮನಸ್ಥಿತಿಗಳ ವಿರುದ್ಧ ಘೋಷಣೆಗಳನ್ನು ಹಾಕಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ ಗದಗಕರ, ರಾಜ್ಯದಲ್ಲಿ ಜಿಹಾದಿ ಮನಸ್ಥಿತಿಗಳು ಹೆಚ್ಚಾಗುತ್ತಿದೆ. ಇದರಿಂದ ಹಿಂದೂ ಕಾರ‍್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.ಪುರಸಭೆ ಉಪಾಧ್ಯಕ್ಷ ಸುಭಾಸ್ ಮಾಳಗಿ ಮಾತನಾಡಿ, ಹಿಂದೂಗಳಿಗೆ ಭಾರತದಲ್ಲಿಯೇ ಸುರಕ್ಷತೆ ಇಲ್ಲದ ಹಾಗಾಗಿದೆ. ದೇಶದ ಒಳಗೂ ಹಾಗೂ ಹೊರಗೆ ಹಿಂದೂ ಜನರು ಎಲ್ಲರ ಟಾರ್ಗೆಟ್ ಅನ್ನುವಂತಾಗಿದೆ. ಇದಕ್ಕೆ ಪೆಹಲ್ಗಾಮ್ ದಾಳಿ ಸೇರಿದಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂಗಳ ಹತ್ಯೆಗಳೇ ಸಾಕ್ಷಿಗಳಾಗಿವೆ ಎಂದು ದೂರಿದರು.ವಿನಾಯಕ ಕಂಬಳಿ ಮಾತನಾಡಿದರು. ವೀರೇಶ ಮತ್ತಿಹಳ್ಳಿ, ನಂದೀಶ ವೀರನಗೌಡ್ರ, ಪ್ರವೀಣ ಯಾದವಾಡ, ರವಿ ಮಾಳಗಿ, ಎನ್.ಎಸ್. ಬಟ್ಟಲಕಟ್ಟಿ, ಪ್ರದೀಪ ಜಾಧವ, ಪ್ರೇಮ ಹರಿಜನ, ರಾಖಿ ಹರಿಜನ, ವಿನಾಯಕ ದೊಣ್ಣಿ ಮಂಜುನಾಥ ಗದಗಕರ, ಪ್ರಕಾಶ ಸುಭಾಸ್ ಹಂಜಿಗಿ, ಮಂಜುನಾಥ ಹಂಜಿಗಿ, ಆದಿತ್ಯ ಗದಗಕರ, ಕಿರಣಕುಮಾರ ಕಣಗಿನಮನಿ ಸೇರಿದಂತೆ ನೂರಾರು ಹಿಂದೂ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.ರಕ್ತದಾನ ಶಿಬಿರ, ಶ್ರವಣೋಪಕರಣಗಳ ವಿತರಣೆ ಇಂದು

ಹಾವೇರಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮೇ 8ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತದ ಸಭಾಭವನದಲ್ಲಿ ಜರುಗಲಿದೆ.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಚೇರಮನ್ ಸಂಜೀವಕುಮಾರ ನೀರಲಗಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಅಧ್ಯಕ್ಷ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಉಪಾಧ್ಯಕ್ಷರಾದ ರುಚಿ ಬಿಂದಲ್ ಹಾಗೂ ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಆಶು ನದಾಫ್ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಗಾಲಿ ಕುರ್ಚಿ ಹಾಗೂ ಶ್ರವಣೋಪಕರಣಗಳ ವಿತರಣೆ ಮಾಡಲಿದ್ದಾರೆ.ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ. ಪ್ರದೀಪಕುಮಾರ ಎಂ.ವಿ. ಅವರು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ