ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಎಜುರೈಟ್ ಕಾಲೇಜಿನ ಸಭಾಂಗಣದಲ್ಲಿ ಶಿವಮೊಗ್ಗ ನಾಲೆಡ್ಜ್ ಫೋರಂ ಹಾಗೂ ಎಜುರೈಟ್ ಕಾಲೇಜ್ ವತಿಯಿಂದ ಆಯೋಜಿಸಿದ್ದ ಅಂತರ ಕಾಲೇಜು ಕ್ವಿಜ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವೃತ್ತಿ ಉದ್ಯೋಗ ಕ್ಷೇತ್ರದಲ್ಲಿ ನಾವು ಯಶಸ್ಸನ್ನು ಸಾಧಿಸಲು ಶಿಕ್ಷಣದ ಜೊತೆ ಕೌಶಲ್ಯವು ಅತ್ಯಂತ ಅಗತ್ಯವಾದ ಸಾಧನವಾಗಿದೆ. ಕೌಶಲ್ಯದ ಕಲಿಕೆಯಿಂದ ವೃತ್ತಿಯಲ್ಲಿ ಹಂತ ಹಂತವಾಗಿ ಉನ್ನತ ಸ್ಥಾನಕ್ಕೆ ಏರಬಹುದಾಗಿದೆ ಎಂದು ತಿಳಿಸಿದರು.ಇಂದಿನ ವಿದ್ಯಾರ್ಥಿಗಳು ಪ್ರಶ್ನೆ ಮಾಡುವ, ಚರ್ಚಿಸುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಯಾವುದೇ ಒಂದು ವಿಷಯವನ್ನು ಸಹ ಅಲಕ್ಷ್ಯ ಮಾಡಬಾರದು. ಸಣ್ಣ ಸಣ್ಣ ಸಾಮಾನ್ಯ ಜ್ಞಾನ ಕೂಡ ಅತ್ಯಂತ ಅಗತ್ಯವಾಗಿ ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅವಕಾಶ ಪಡೆಯಲು, ಯಶಸ್ಸನ್ನು ಸಾಧಿಸಲು ಕೌಶಲ್ಯವು ಅತ್ಯಂತ ಅಗತ್ಯ ಎಂದರು.
ಶಿವಮೊಗ್ಗ ನಾಲೆಡ್ಜ್ ಫೋರಂ ಜಿಲ್ಲೆಯ ಎಲ್ಲ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಹಾಗೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.
ನಾಲೆಡ್ಜ್ ಫೋರಂ ವತಿಯಿಂದ ಶಿವಮೊಗ್ಗ ಹಾಗೂ ಜಿಲ್ಲಾದ್ಯಂತ ಮಕ್ಕಳ ವ್ಯಕ್ತಿತ್ವ ವಿಕಸನ, ಜ್ಞಾನಾರ್ಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಅವರ ಭವಿಷ್ಯದ ಕೈಗನ್ನಡಿ ಆಗುತ್ತೇವೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಂತರ ಕಾಲೇಜು ಕ್ವಿಜ್ ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವೇದಿಕೆಯಲ್ಲಿ ಪ್ರಸನ್ನಾ, ಮಂಜುನಾಥ್, ಮೋಹನ್, ಕಿರಣ್ ಉಡುಪ, ಶಿಖೇರ್ ಧವನ್, ಅಮಿತ್ ಕುಮಾರ್, ತೇಜೋನಿಧಿ, ವರ್ಷಿತಾ ಮತ್ತಿತರರು ಉಪಸ್ಥಿತರಿದ್ದರು.- - - -7ಎಸ್ಎಂಜಿಕೆಪಿ01: