ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸಿ.ಭೀಮಸೇನರಾವ್ ಕಾನೂನು ಕಾಲೇಜಿನಲ್ಲಿ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ, ಸಿ.ಭೀಮಸೇನರಾವ್ ಕಾನೂನು ಕಾಲೇಜು, ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕಾನೂನು ವಿದ್ಯಾರ್ಥಿಗಳಿಗಾಗಿ ಶನಿವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಅನುಸಂಧಾನ ಸ್ಪರ್ಧೆಯ ಸಮಾರೋಪದಲ್ಲಿ ಬಹುಮಾನ ವಿತರಿಸಿ ಮಾತನಾಡಿ, ಮಾತೃಭಾಷೆ ಎಂಬುದು ಅಭಿವ್ಯಕ್ತಿಯ ಅದ್ಭುತ ಸಾಧನ. ರಾಜ್ಯೋತ್ಸವದ ಆಚರಣೆಯ ಜೊತೆಗೆ ಭಾಷೆಯನ್ನು ಬೆಳೆಸಿ, ಸದಾ ಪ್ರಸ್ತುತವಾಗಿಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅರಿತುಕೊಳ್ಳಿ. ಮಾತೃಭಾಷೆಯಲ್ಲಿ ಸಾಧಿಸದವನು ಇತರೆ ಯಾವ ಭಾಷೆಯಲ್ಲಿಯೂ ಸಾಧಿಸಲಾರ. ಕನ್ನಡದ ಅಸ್ಮಿತೆ ಉಳಿಸಿಕೊಳ್ಳುವಲ್ಲಿ ಕುವೆಂಪು ಅವರ ಕೊಡುಗೆ ಅಪಾರ ಎಂದರು.
ಮಾನವ ಸಂಬಂಧದಲ್ಲಿ ಅನುಸಂಧಾನ ಅತಿ ಮುಖ್ಯ. ವಿವಾದಗಳನ್ನು ಶಾಂತ ರೂಪವಾಗಿ ಬಗೆಹರಿಸುವ ಕಲೆ ವಕೀಲ ವೃತ್ತಿಯಲ್ಲಿ ಅತ್ಯವಶ್ಯಕ. ಅನುಸಂಧಾನದಿಂದ ಇಬ್ಬರು ಕಕ್ಷಿದಾರರಲ್ಲಿಯು, ಮನಸ್ಸಿಗೆ ನೆಮ್ಮದಿ ಸಿಗುವಂತಹ ಸಂದರ್ಭ ರೂಪಿಸಿ, ಹಣಕ್ಕಿಂತ, ಜನರ ವಿಶ್ವಾಸ ನಂಬಿಕೆ ಗಳಿಸುವತ್ತ ಕೇಂದ್ರಿಕರಿಸಿ. ವಕೀಲರು ಸಮಾಜವನ್ನು ಉತ್ತಮದೆಡೆಗೆ ಪರಿವರ್ತಿಸಬಲ್ಲ ಶಕ್ತಿ ಹೊಂದಿದ್ದಾರೆ ಎಂದರು.ನಿರ್ಗತಿಕರಿಗೆ, ಬಡವರಿಗೆ, ಸಮಾಜದ ಅಭಿವೃದ್ಧಿಗೆ ನಿಮ್ಮ ಬುದ್ದಿವಂತಿಕೆಯನ್ನು ಪಸರಿಸುವ ಕಾರ್ಯಮಾಡಿ, ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಿ. ಜಾತಿ, ಲಂಚ ಮತ್ತು ಅಪರಾಧಗಳು ದೇಶವನ್ನು ಬಾಧಿಸುತ್ತಿದೆ. ದೇಶದ ಹಿತಾಸಕ್ತಿಗಿಂತ ವೈಯುಕ್ತಿಕ ಹಿತಾಸಕ್ತಿಗಳು ಜಾಸ್ತಿಯಾಗುತ್ತಿದೆ. ಆಷಾಢಭೂತಿಗಳು ಜಾಸ್ತಿಯಾಗುತ್ತಿದ್ದು, ಮೌಲ್ಯಗಳು ಕಣ್ಮರೆಯಾಗುತ್ತಿರುವ ಆತಂಕದಲ್ಲಿದ್ದೇವೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಅನುಸಂಧಾನದಲ್ಲಿ ಪ್ರಾಮಾಣಿಕತೆ ಮತ್ತು ಸಮಗ್ರತೆ ಎಂಬುದು ಅತ್ಯಮೂಲ್ಯ. ವೃತ್ತಿ ಧರ್ಮದಲ್ಲಿ ಪ್ರಾಮಾಣಿಕತೆ ಉಳಿಸಿಕೊಂಡಾಗ ಮಾತ್ರ, ಸವಾಲುಗಳನ್ನು ಎದುರಿಸುವ ಸ್ಥೈರ್ಯ ದೊರಕಲಿದೆ ಎಂದು ಹೇಳಿದರು.
ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ಪ್ರಥಮ