ದರ್ಶನ್‌ ಇರುವ ಠಾಣೆ ಸುತ್ತ ನಿಷೇಧಾಜ್ಞೆ

KannadaprabhaNewsNetwork |  
Published : Jun 14, 2024, 01:02 AM IST

ಸಾರಾಂಶ

ನಟ ದರ್ಶನ್ ಅಭಿಮಾನಿಗಳ ಜಮಾವಣೆ ನಿಯಂತ್ರಿಸುವ ಉದ್ದೇಶದಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿಚಾರಣೆ ನಡೆದಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ಸುತ್ತ ಐದು ದಿನಗಳ ಕಾಲ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- ಅಭಿಮಾನಿಗಳ ನಿಯಂತ್ರಣಕ್ಕಾಗಿ 5 ದಿನ ‘144’

ಕನ್ನಡಪ್ರಭ ವಾರ್ತೆ ಬೆಂಗಳೂರು

ನಟ ದರ್ಶನ್ ಅಭಿಮಾನಿಗಳ ಜಮಾವಣೆ ನಿಯಂತ್ರಿಸುವ ಉದ್ದೇಶದಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿಚಾರಣೆ ನಡೆದಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ಸುತ್ತ ಐದು ದಿನಗಳ ಕಾಲ 144 ಸೆಕ್ಷನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್‌ ಆದೇಶಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ಬಳಿಕ ಠಾಣೆ ಮುಂದೆ ಗುಂಪುಗೂಡಿ ಜೈ ಕಾರ ಕೂಗಿ ಅವರ ಅಭಿಮಾನಿಗಳು ಗದ್ದಲವೆಬ್ಬಿಸಿದ್ದರು. ಈ ಕೂಗಾಟ ಜೋರಾದ ಕಾರಣ ಲಘು ಲಾಠಿ ಪ್ರಹಾರ ನಡೆಸಿ ಅಭಿಮಾನಿಗಳನ್ನು ಬುಧವಾರ ಪೊಲೀಸರು ಚದುರಿಸಿದ್ದರು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್‌ 144 ರಡಿ ಠಾಣಾ ವ್ಯಾಪ್ತಿ 200 ಮೀಟರ್ ಸುತ್ತಮುತ್ತ ಆಯುಕ್ತರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆ ಜಾರಿ ಬಳಿಕ ಠಾಣೆ ಮುಂದೆ ಜನರ ಗುಂಪುಗೂಡುವಿಕೆ ಸ್ಥಗಿತವಾಗಿದೆ.ದರ್ಶನ್ ಇರುವ ಠಾಣೆ

ಪೆಂಡಾಲ್‌ ಹಾಕಿ ಮರೆ!

- ಠಾಣೆ ಒಳಗೆ ನಟನಿಗೆ ರಾಜಾತಿಥ್ಯ: ಕೆಲವರ ಆರೋಪ

ಕನ್ನಡಪ್ರಭ ವಾರ್ತೆ ಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಂಧಿತರಾಗಿರುವ ಚಿತ್ರ ನಟ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ಆದರೆ ಠಾಣೆಯ ಸುತ್ತ ಶಾಮಿಯಾನ ಹಾಕಿ ಇಡೀ ಠಾಣೆಯ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದಂತೆ ಮರೆಮಾಚಲಾಗಿದೆ. ಪೊಲೀಸರ ಈ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಈ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಹಾಗೂ ಅವರ ಪ್ರಿಯತಮೆ ಪವಿತ್ರಾಗೌಡ ಸೇರಿದಂತೆ 13 ಮಂದಿಯನ್ನು ಅನ್ನಪೂರ್ಣೇಶ್ವರಿ ನಗರದ ಠಾಣೆಯಲ್ಲಿಟ್ಟು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೀಗಾಗಿ ವಿಚಾರಣೆಗೆ ಅಡ್ಡಿಯಾಗಬಾರದು ಎಂಬ ‘ಸಬೂಬು’ ನೀಡಿ ಠಾಣೆ ಹೊರಗಡೆ ಶಾಮಿಯಾನ ಹಾಕಲಾಗಿದೆ ಹಾಗೂ ಠಾಣಾ ಕಟ್ಟಡ ಕಾಣದಂತೆ ಪೊಲೀಸರು ಮರೆಮಾಚಿದ್ದಾರೆ.ಸೂಕ್ಷ್ಮ ಪ್ರಕರಣ- ಡಿಸಿಪಿ ಸ್ಪಷ್ಟನೆ:

‘ಶಾಮಿಯಾನಾ ಮರೆಮಾಚಿರುವ ಹಿಂದೆ ಅನ್ಯ ಉದ್ದೇಶವಿದೆ. ಆರೋಪಿಗಳಿಗೆ ಠಾಣೆ ಒಳಗೆ ರಾಜಾತಿಥ್ಯ ನೀಡಲಾಗುತ್ತಿದೆ’ ಎಂದು ಕೆಲವರು ಆರೋಪಿಸಿದ್ದಾರೆ. ಈ ಬಗ್ಗೆ ಪಶ್ಚಿಮ ವಿಭಾಗದ ಡಿಸಿಪಿ ಎಸ್‌.ಗಿರೀಶ್ ಸ್ಪಷ್ಟನೆ ನೀಡಿ, ‘ರೇಣುಕಾಸ್ವಾಮಿ ಕೊಲೆ ಕೃತ್ಯವು ಎಲ್ಲ ಸಾಮಾನ್ಯ ಪ್ರಕರಣದಂತಲ್ಲ. ಈ ಪ್ರಕರಣದ ತನಿಖೆಗೆ ಸಾಕಷ್ಟು ಶ್ರಮ ವಹಿಸಲಾಗಿದೆ. ಹಲವು ಆಯಾಮಗಳಿಂದ ತನಿಖೆ ನಡೆದಿದ್ದು, ಪ್ರಕರಣದ ಪಾವಿತ್ರ್ಯತೆ ಕಾಪಾಡಬೇಕಿದೆ. ಹೀಗಾಗಿ ಕೆಲವು ಕ್ರಮ ವಹಿಸಲಾಗಿದೆ ಹೊರತೂ ಬೇರೆ ಉದ್ದೇಶವಿಲ್ಲ. ತನಿಖೆ ವಿಚಾರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ
ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?