)
ಕನ್ನಡಪ್ರಭ ವಾರ್ತೆ ವಿಧಾನ ಪರಿಷತ್
ಕಾಂಗ್ರೆಸ್ ಸದಸ್ಯ ಎಂ. ನಾಗರಾಜು ಅವರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮೆಜೆಸ್ಟಿಕ್ ಬಸ್ ನಿಲ್ದಾಣ ಜಾಗ 40 ಎಕರೆ ಪ್ರದೇಶ ಹೊಂದಿದ್ದು, ಈ ಪೈಕಿ ಎಂಟು ಎಕರೆ ಜಾಗವನ್ನು ಮೆಟ್ರೋ ರೈಲು ನಿಲ್ದಾಣಕ್ಕೆ ನೀಡಲಾಗಿದೆ. ಉಳಿದಿರುವ ಕೆಎಸ್ಆರ್ಟಿಸಿಯ 20 ಎಕರೆ ಹಾಗೂ ಬಿಎಂಟಿಸಿಯ 12 ಎಕರೆ ಜಾಗದಲ್ಲಿ ಸಿಂಗಾಪುರವನ್ನು ಮೀರಿಸುವ ರೀತಿಯಲ್ಲಿ ಎರಡು ನಿಗಮಗಳು ಜಂಟಿಯಾಗಿ ‘ಇಂಟರ್ ಮೋಡಲ್ ಟ್ರಾನ್ಸಿಟ್ ಹಬ್’ ಆಗಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಈ ಯೋಜನೆ ಕೈಗೊಳ್ಳಲು ಸರ್ಕಾರ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ನೋಂದಾಯಿತ ಮೆ. ರಿಸರ್ಜಂಟ್ ಇಂಡಿಯಾ ಲಿಮಿಟೆಡ್ಗೆ ಟೆಂಡರ್ ಮೇಲೆ ನೇಮಕಗೊಂಡಿದ್ದಾರೆ. ಈಗಾಗಲೇ ಕಾರ್ಯಾದೇಶ ಪತ್ರ ಸಹ ನೀಡಲಾಗಿದೆ. ಈ ಸಂಸ್ಥೆ ಯೋಜನೆಯನ್ನು ಅನುಷ್ಠಾನಗೊಳಿಸಲು ಬೇಕಾದ ನಕ್ಷೆ, ಯೋಜನೆಯ ರೂಪುರೇಷೆ, ದಾಖಲೆಗಳು, ಅಭಿವೃದ್ಧಿದಾರರನ್ನು ಆಯ್ಕೆಗೊಳಿಸಲು ಬೇಕಾದ ಟೆಂಡರ್ ದಸ್ತಾವೇಜನ್ನು ತಯಾರಿಸಲು ಬೇಕಾದ ಸಂಚಾರ ಅಧ್ಯಯನ, ಮಾರುಕಟ್ಟೆ ಅಧ್ಯಯನ, ತಾಂತ್ರಿಕ ಅಧ್ಯಯನ ವರದಿಗಳನ್ನು ಪ್ರಾರಂಭಿಸಿರುತ್ತಾರೆ ಎಂದು ವಿವರಿಸಿದರು.
ಯೋಜನೆಯನ್ನು ಅನುಷ್ಠಾನಗೊಳಿಸಲು ಬೇಕಾದ ಪ್ರಾಥಮಿಕ ಮಾಹಿತಿಗಳನ್ನು ಸಂಗ್ರಹಿಸಿ ಇನ್ಸೆಪ್ಷನ್ ರಿಪೋರ್ಟ್ ಹಾಗೂ ಕಾನ್ಸೆಪ್ಟ್ ರಿಪೋರ್ಟ್ಗಳನ್ನು ತಯಾರಿಸಿದ್ದಾರೆ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ ಉಳಿಸಿಕೊಂಡು ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಯೋಜನೆಯ ಮೊತ್ತ ಸೇರಿದಂತೆ ಇನ್ನಿತರ ವಿವರಗಳು ಖಾಸಗಿ ಸಂಸ್ಥೆ ವರದಿ ನೀಡಿದ ನಂತರ ತಿಳಿಯಲಿದೆ ಎಂದು ಹೇಳಿದರು.ಇದಕ್ಕೂ ಮುನ್ನ ಮಾತನಾಡಿದ ಎಂ. ನಾಗರಾಜು, ಸಾವಿರಾರು ಕೋಟಿ ರು. ಬೆಲೆ ಬಾಳುವ ಜಾಗವನ್ನು ಕೇವಲ ಬಸ್ ಸಂಚಾರಕ್ಕೆ ಬಳಸುವುದರಿಂದ ಉಪಯೋಗವಾಗುವುದಿಲ್ಲ. ಈ ಜಾಗದಲ್ಲಿ ಮಾಲ್, ಹೊಟೇಲ್ ಸೇರಿದಂತೆ ಅತ್ಯಾಧುನಿಕ, ಆಕರ್ಷಕವಾದ, ಅಂತಾರಾಷ್ಟ್ರೀಯ ಮಟ್ಟದ ಬಸ್ ನಿಲ್ದಾಣ ನಿರ್ಮಿಸಿದರೆ ಸಾರಿಗೆ ನಿಗಮಗಳಿಗೆ ದೊಡ್ಡ ಆದಾಯ ಬರುತ್ತದೆ. ಆದಷ್ಟು ಬೇಗ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.