ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Mar 09, 2024, 01:31 AM IST
೮ಕೆಎಂಎನ್‌ಡಿ-೨ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ ನೀಡಿದರು. | Kannada Prabha

ಸಾರಾಂಶ

‘ಯತ್ತಂಬಾಡಿ ಗ್ರಾಮದಲ್ಲಿ ಶ್ರೀಕಾಳೇಶ್ವರಸ್ವಾಮಿ ದೇವಾಲಯದ ಬಳಿ ಸಮುದಾಯ ಭವನ ಮತ್ತು ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುತ್ತೇನೆ.’

ಕನ್ನಡಪ್ರಭ ವಾರ್ತೆ ಹಲಗೂರುಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ನೀಡಿದ್ದ ಭರವಸೆ ಈಡೇರಿಸಲು ಬದ್ಧನಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೆನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು.

ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅನುದಾನದ ಅಡಿಯಲ್ಲಿ ೨ ಕೋಟಿ ರು.ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮತ್ತು ೩ ಕೋಟಿ ವೆಚ್ಚದಲ್ಲಿ ಧನಗೂರು ಗ್ರಾಮದಲ್ಲಿ ನೂತನ ಎಂಯುಎಸ್‌ಎಸ್ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಯತ್ತಂಬಾಡಿ ಗ್ರಾಮದಲ್ಲಿ ಶ್ರೀಕಾಳೇಶ್ವರ ಸ್ವಾಮಿ ದೇವಾಲಯದ ಬಳಿ ಸಮುದಾಯ ಭವನ ಮತ್ತು ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಕಸಬಾ ಹೋಬಳಿಯ ಅಂತರವಳ್ಳಿ, ಯತ್ತಂಬಾಡಿ, ಬೆಳತೂರು, ಅಪ್ಪಾಜಯ್ಯನದೊಡ್ಡಿ, ಬಾಣಗಹಳ್ಳಿ, ಹುಲ್ಲಹಳ್ಳಿ, ಹುಲ್ಲಾಗಾಲ, ದಡಮಹಳ್ಳಿ, ಬಾಣಸಮುದ್ರ, ಕೋಡಿಪುರ, ಚೆನ್ನೀಪುರ, ಡಿ.ಹಲಸಹಳ್ಳಿ, ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನಡೆಸಿದ್ದು, ಈಗಾಗಲೇ ಇನ್ನೂ ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಲೋಕಸಭಾ ಚುನಾವಣೆಯ ನಂತರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.

ಬಾಣಸಮುದ್ರ ಗೇಟ್‌ನಲ್ಲಿ ಒಂದು ಬಸ್ ತಂಗುದಾಣ ನಿರ್ಮಿಸಬೇಕು ಮತ್ತು ಕೆಎಸ್‌ಆರ್‌ಟಿಸಿ ಬಸ್ ಕೋರಿಕೆ ನಿಲುಗಡೆ ಇದ್ದು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಬಸ್ಸುಗಳನ್ನು ನಿಲ್ಲಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮಸ್ಥರು ಶಾಸಕರಲ್ಲಿ ಮನವಿ ಮಾಡಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ, ಕಾರ್ಯಾದ್ಯಕ್ಷ ಶಿವಮಾದೇಗೌಡ, ಮುಖಂಡರಾದ ಆರ್.ಎನ್.ವಿಶ್ವಾಸ್, ಮಾದೇಶ್, ಎಚ್.ಆರ್.ಶಿವಮಾದೇಗೌಡ, ಚಂದ್ರಕುಮಾರ್, ಕುಂತೂರು ಗೋಪಾಲ್, ಎಂ.ಶಿವಕುಮಾರ್, ಕೃಷ್ಣಪ್ಪ, ಕೆ.ಎಸ್.ದ್ಯಾಪೇಗೌಡ, ಸಿ.ಪಿ.ರಾಜು, ಅಂಬರೀಶ್, ರೋಹಿತ್, ಚಿಕ್ಕಸ್ವಾಮಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!