ಗ್ಯಾರಂಟಿ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ನಡೆಸಿ

KannadaprabhaNewsNetwork |  
Published : Mar 27, 2025, 01:01 AM IST
ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ  ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ದೊರಕಿಸಲು ಯೋಜನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಾಪಕವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್ ಬೋರಾಮಣಿ ಸೂಚನೆ

ಕನ್ನಡಪ್ರಭ ವಾರ್ತೆ ವಿಜಯಪುರ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ದೊರಕಿಸಲು ಯೋಜನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಾಪಕವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್ ಬೋರಾಮಣಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೆಚ್ಚುವರಿ ಬಸ್‌ಗಳ ಬೇಡಿಕೆಗಾಗಿ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು. ೫ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೧೧.೪೨ ಕೋಟಿ ಮಹಿಳೆಯರು ಮತ್ತು ಮಕ್ಕಳು ಉಚಿತವಾಗಿ ಪ್ರಯಾಣಿಸಿದ್ದು, ₹ ೩೫೯.೨೨ ಕೋಟಿ ವೆಚ್ಚವಾಗಿದೆ. ಇನ್ನೂ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ, ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ಹೋಗಲು ಹೆಚ್ಚವರಿ ಬಸ್‌ಗಳನ್ನು ಓಡಿಸಲು ಮತ್ತು ಅಂತರ ರಾಜ್ಯಗಳಿಗೆ ಹೊಂದಿಕೊಂಡಿರುವ ಗ್ರಾಮಗಳಿಗೆ ಬಸ್‌ಗಳ ನಿಲುಗಡೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದರು.

ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸಭೆಗೆ ಮಾಹಿತಿ ನೀಡಿ, ಶಕ್ತಿ ಯೋಜನೆಯಡಿ ಸಾಧಿಸಲಾದ ಪ್ರಗತಿ ಹಾಗೂ ಜಿಲ್ಲೆಯಿಂದ ಬೆಂಗಳೂರಿಗೆ ಅಮೋಘವರ್ಷ ಹಾಗೂ ಕಲ್ಯಾಣ ರಥ ಬಸ್‌ ಸೇವೆ ಆರಂಭಿಸಲಾಗಿದ್ದು, ಈ ಬಸ್‌ಗಳಿಂದ ಸಾರ್ವಜನಿಕರಿಗೆ ಕಲ್ಪಿಸಲಾದ ಅನುಕೂಲತೆಗೆ ಕೇಂದ್ರ ಸರ್ಕಾರದಿಂದ ಬಹುಮಾನ ನೀಡಲಾಗಿದೆ. ಜಿಲ್ಲೆಗೆ ಹೆಚ್ಚುವರಿ ಬಸ್‌ಗಳನ್ನು ಒದಗಿಸಿದ್ದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಶಿಫಾರಸಿನ ಮೇರೆಗೆ ಅವಶ್ಯಕತೆ ಇರುವ ಕಡೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಹಾಗೂ ಬಸ್ ನಿಲ್ದಾಣಗಳಲ್ಲಿರುವ ಆವರಣ ಮತ್ತು ಶೌಚಾಲಯಗಳಲ್ಲಿ ಸ್ವಚ್ಛತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಗೃಹ ಜ್ಯೋತಿ ಯೋಜನೆಯಡಿ ಈವರೆಗೆ ₹ ೪,೩೮,೩೭೮ ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದು, ಈವರೆಗೆ ಒಟ್ಟು ₹ ೩೩೭.೨೭ ಕೋಟಿಗಳು ವೆಚ್ಚವಾಗಿದೆ. ಅರ್ಹ ಕುಟುಂಬಕ್ಕೆ ೨೦೦ ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ ಸಂಪೂರ್ಣವಾಗಿ ಉಚಿತವಾಗಿ ೧೦ ಕೆ.ಜಿ ಅಕ್ಕಿ ವಿತರಣೆ, ಗೃಹಲಕ್ಷ್ಮೀ ಯೋಜನೆಯಡಿ ಡಿಬಿಟಿ ಮೂಲಕ ಅಕ್ಟೋಬರ ೨೦೨೪ರ ವರೆಗೆ ₹ ೨೦೦೦ ನೋಂದಾಯಿತ ಫಲಾನುಭವಿಗಳಿಗೆ ಸಹಾಯ ಧನ ವಿತರಣೆ, ಯುವನಿಧಿ ಯೋಜನೆಯಡಿ ಜನೆವರಿ ೨೦೨೫ ಅಂತ್ಯದ ವರೆಗೆ ನೋಂದಾಯಿತ ಪದವೀಧರ ಹಾಗೂ ಡಿಪ್ಲೋಮಾ ನಿರುದ್ಯೋಗಿ ಯುವಕರಿಗೆ ₹ ೩೦೦೦ ಹಾಗೂ ₹ ೧೫೦೦ ಗಳಂತೆ ಸಹಾಯ ಧನವನ್ನು ಡಿಬಿಟಿ ಮೂಲಕ ವಿತರಿಸಲಾಗಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾದ್ಯಕ್ಷ ಸುಂದರಪಾಲ ರೂಪಸಿಂಗ್‌ ರಾಠೋಡ, ನಬಿಲಾಲ ಶಾಬುದ್ದೀನ ನಾಯ್ಕೋಡಿ, ಆನಂದ ಜಾಧವ ಹಾಗೂ ಮಹಾದೇವಿ ಅಶೋಕ ಗೋಕಾಕ ಸೇರಿದಂತೆ ಮುಂತಾದವರು ಇದ್ದರು. ಜಿಲ್ಲಾ ಪಂಚಾಯತಿ ಯೋಜನಾ ಮತ್ತು ಅಂದಾಜು ಮೌಲ್ಯಮಾನಪನಾಧಿಕಾರಿ ಎ.ಬಿ.ಅಲ್ಲಾಪುರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರವಾರದಲ್ಲಿ ನಾಳೆ ರಾಷ್ಟ್ರಪತಿ ಮುರ್ಮು ಸಬ್‌ಮರೀನ್‌ ಯಾನ
ಬಿಜೆಪಿ ರಾಜ್ಯಗಳಲ್ಲಿ ಯಾಕೆ ನೌಕರಿ ಸೃಷ್ಟಿ ಆಗಿಲ್ಲ : ಸಿದ್ದರಾಮಯ್ಯ