ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಿ: ದೇವಪ್ಪ ಭಾವಿಕಟ್ಟಿ

KannadaprabhaNewsNetwork |  
Published : Mar 10, 2026, 03:15 AM IST
ಕಾರಟಗಿ ತಾಪಂ ಕಚೇರಿಯಲ್ಲಿ ಸೋಮವಾರ ವಿಶ್ವ ಮಹಿಳಾ ದಿನದ ಕಾರ್ಯಕ್ರಮಕ್ಕೆ ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ದೇವಪ್ಪ ಭಾವಿಕಟ್ಟಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಕಾರಟಗಿ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿವರಿಸಲಾಯಿತು.

ಕಾರಟಗಿ: ರಾಜ್ಯದಲ್ಲಿ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಸ್ವಸಹಾಯ ಗುಂಪಿನ ಸದಸ್ಯರು ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ದೇವಪ್ಪ ಭಾವಿಕಟ್ಟಿ ಹೇಳಿದರು.

ತಾಪಂ ಕಚೇರಿ ಸಭಾಂಗಣದಲ್ಲಿ ತಾಪಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆ ವತಿಯಿಂದ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ವಸಹಾಯ ಸಂಘದ ಮಹಿಳೆಯರು ಹೆಚ್ಚು ಪ್ರಚಾರ ಮೂಡಿಸಿ ಯೋಜನೆಯಿಂದ ಹೊರಗುಳಿದವರನ್ನು ಯೋಜನೆಯತ್ತ ಕರೆತರುವ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಆಗಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ಸೋಮನಾಥ ದೊಡ್ಡಮನಿ ಮಾತನಾಡಿ, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಬಡ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಮಹಿಳೆಯರು ಸ್ವಂತ ಕಿರು ಉದ್ಯಮ ಆರಂಭಿಸಲು ಗೃಹಲಕ್ಷ್ಮೀ ಯೋಜನೆ ನೆರವಾಗಿದೆ ಎಂದು ಹೇಳಿದರು.

ತಾಪಂ‌ ಇಒ ಹಾಗೂ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಷ್ಮೀದೇವಿ ಮಾತನಾಡಿ, ಪ್ರತಿಯೊಬ್ಬ ಮಹಿಳೆ ಪ್ರಜ್ಞಾವಂತರಾಗಿ ಕಾನೂನಿನ ತಿಳಿವಳಿಕೆ ಹಾಗೂ ಅರಿವು ಹೊಂದಿದರೆ ಮಹಿಳಾ ಸಬಲೀಕರಣಕ್ಕೆ ನಾಂದಿ ಆಗಬಲ್ಲದು ಎಂದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ದೀಪಾ ಕುಮಾರ್ ರಾಥೋಡ್ ಮಾತನಾಡಿದರು. ತಾಲೂಕು ಅನುಷ್ಠಾನ ಸಮಿತಿ ಸದಸ್ಯ ಶಿವಕುಮಾರ್ ಗೋನಾಳ್, ಸ್ವಸಹಾಯ ಗುಂಪಿನ ಸದಸ್ಯೆ ವೀರಮ್ಮ, ಅಂಜಲಿ ಅವರು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಮಹಿಳೆಯರು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಮಹಿಳೆಯರಿಗೆ ಮ್ಯೂಜಿಕಲ್ ಚೇರ್ ಏರ್ಪಡಿಸಲಾಗಿತ್ತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ನಾಗರಾಜ್ ಅರಳಿ, ಸದಸ್ಯೆ ಶಕುಂತಲಾ ಸಹಾಯಕ ನಿರ್ದೇಶಕಿ ವೈ. ವನಜಾ, ತಾಲೂಕು ಅನುಷ್ಠಾನ ಸಮಿತಿಯ ಸದಸ್ಯ ವೈ. ರಾಮಕೃಷ್ಣ, ರೇಣುಕಮ್ಮ, ಮುತ್ತಣ್ಣ, ಚಂದ್ರಶೇಖರ ಉಪ್ಪಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಿಷ್ಠವೇತನ ನೀಡಿ, ಇಲ್ಲವಾದರೆ ಸೀರೆ ವಾಪಸ್‌ ಕಳುಹಿಸುತ್ತೇವೆ-ರೇವಣಕರ
ಕಾರಿನ ಮೇಲೆ ಕಂಟೈನರ್ ಬಿದ್ದು 8 ವರ್ಷದ ಮಗು ಬಲಿ