ಕನ್ನಡಪ್ರಭವಾರ್ತೆ ಸಾಗರ
ಇಲ್ಲಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರಿಗೆ ಸಮರ್ಪಕವಾಗಿ ಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು. ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಬೇಕಾದ ಎಲ್ಲ ರೀತಿ ಸಹಕಾರ ನೀಡುವಂತೆ ಆದೇಶಿಸಿದರು.
ಬೆಳೆವಿಮೆ ಬಗ್ಗೆ ರೈತರಿಗೆ ಮಾಹಿತಿ ನೀಡಿ, ಹೆಚ್ಚು ರೈತರು ವಿಮೆ ಮಾಡಿಸಿಕೊಳ್ಳುವಂತೆ ಪ್ರೇರೆಪಿಸಿ. ಮಣ್ಣು ಪರೀಕ್ಷೆ ಕಾಲಕಾಲಕ್ಕೆ ನಡೆಸಿ ಉತ್ತಮ ಫಸಲು ತೆಗೆಯಲು ನೆರವಾಗಿ ಎಂದು ಸೂಚಿಸಿದ ಶಾಸಕರು, ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ಕಳೆದುಕೊಂಡ ಹಿನ್ನೀರಿನ ಜನರಿಗೆ ದಿನದ ೨೪ ಗಂಟೆ ವಿದ್ಯುತ್ ಕೊಡುವುದು ನಮ್ಮ ಕರ್ತವ್ಯ. ಮಳೆಗಾಲದಲ್ಲಿ ಆ ಭಾಗದ ಜನರಿಗೆ ವಿದ್ಯುತ್ ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯವಾಗುತ್ತದೆ. ಹಾಗಾಗಿ ತುಮರಿ ಸೇರಿ ಶರಾವತಿ ಹಿನ್ನೀರು ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸಿ. ನಾವು ಬೆಳಕಿನಲ್ಲಿದ್ದು ಹಿನ್ನೀರಿನ ಜನರು ಕತ್ತಲಿನಲ್ಲಿರುವುದು ಎಂತಹ ನ್ಯಾಯ. ಅವರ ಸಮಸ್ಯೆಗೆ ಸ್ಪಂದಿಸಿ ಎಂದು ಮೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.ಉಪವಿಭಾಗಾಧಿಕಾರಿ ಯತೀಶ್ ಆರ್, ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್, ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈ, ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್, ತಾಲೂಕು ಪಂಚಾಯ್ತಿ ಆಡಳಿತಾಧಿಕಾರಿ ಸುಜಾತ, ಪೌರಾಯುಕ್ತ ಎಚ್.ಕೆ.ನಾಗಪ್ಪ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚುತ್ತಿರುವ ಹಿನ್ನೆಲೆ ಕ್ಷೇತ್ರ ವ್ಯಾಪ್ತಿ ಆಸ್ಪತ್ರೆಗಳಲ್ಲಿ ವೈದ್ಯರು ರಜೆ ಹಾಕದೇ ಕೆಲಸ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು. ಡೇಂಘೀವಿನಿಂದ ಈಗಾಗಲೆ ಓರ್ವ ನೌಕರರನ್ನು ನಾವು ಕಳೆದುಕೊಂಡಿದ್ದೇವೆ. ಮುಂದೆ ಅಂತಹ ಸಾವು-ನೋವು ನಮ್ಮ ತಾಲೂಕಿನಲ್ಲಿ ಆಗಬಾರದು. ಮೃತ ನೌಕರನ ಕುಟುಂಬಕ್ಕೆ ಕನಿಷ್ಟ ₹೫ ಲಕ್ಷ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಗಮನ ಹರಿಸಬೇಕು. ವೈದ್ಯರು ಕರ್ತವ್ಯಕ್ಕೆ ವಿಳಂಬವಾಗಿ ಹಾಜರಾಗುವುದು, ರಜೆ ಹಾಕುವುದು ಮಾಡಿದರೆ ಅಂಥವರಿಗೆ ನೋಟಿಸ್ ನೀಡಲು ಸಿವಿಲ್ ಸರ್ಜನ್ಗೆ ಸೂಚನೆ ನೀಡಿದರು.