ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಯಲ್ಲಾಪುರ
ಸೋಮವಾರ ಪಟ್ಟಣದ ವೆಂಕಟ್ರಮಣ ಮಠದ ಆವಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಳ್ಳಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ಜಿಲ್ಲೆಯ ನಿರ್ದೇಶಕ ದಿನೇಶ ಎಂ ಮಾತನಾಡಿ, ಸಮಾಜದಲ್ಲಿಂದು ಯುವಜನತೆ ಅನೇಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಸರ್ಕಾರದಿಂದಲೂ ಅದನ್ನು ನಿಯಂತ್ರಣ ಮಾಡದಷ್ಟು ಬೆಳೆದಿದೆ. ಅದರ ನಿಯಂತ್ರಣ ಮಾಡಬೇಕಾದರೆ ಮಕ್ಕಳಿಗೆ ಜಾಗೃತಿ ಮೂಡಿಸುವಂತಾಗಬೇಕು. ನಾವು ಈವರೆಗೆ ೨೫೦೦ಕ್ಕಿಂತಲೂ ಹೆಚ್ಚಿನ ಶಾಲೆಗಳಿಗೆ ಹೋಗಿ ಜಾಗೃತಿ ಮೂಡಿಸಿದ್ದೇವೆ. ಕುಡುಕರನ್ನು ಮನಃಪರಿವರ್ತನೆ ಮಾಡಿಯೇ ಬಿಡಿಸಬೇಕು. ಆ ದೃಷ್ಟಿಯಿಂದ ಯಲ್ಲಾಪುರ ತಾಲೂಕಿನಲ್ಲಿ ಸೆ. ೧ರಿಂದ ೮ ರವರೆಗೆ ಈ ಶಿಬಿರ ನಡೆಯಲಿದೆ. ಈಗಾಗಲೇ ೨೨೧೨ ಶಿಬಿರ ನಡೆದಿವೆ. ೧,೩೦,೦೦೦ ಜನರನ್ನು ಮದ್ಯ ಮುಕ್ತರನ್ನಾಗಿಸಿದ್ದೇವೆ ಎಂದರು.ಜಿಲ್ಲಾ ಜನಜಾಗೃತಿ ಸಮಿತಿಯ ಅಧ್ಯಕ್ಷೆ ಗೌರಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಕಾಯಾಧ್ಯಕ್ಷರಾಗಿ ಆಯ್ಕೆಯಾದ ಮುರಳಿ ಹೆಗಡೆ ಮಾತನಾಡಿದರು.