ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ರೇಷ್ಮೆ ಬೆಳೆಗಾರರು ಖಾಸಗಿ ಮಾರಾಟಗಾರರ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಲ್ಲದೇ, ರೇಷ್ಮೆ ಬೆಳೆ ಮಾರಾಟಕ್ಕಾಗಿ ಬೆಳೆಗಾರರು ರಾಮನಗರ, ಮಳವಳ್ಳಿ ಅಥವಾ ಕೊಳ್ಳೇಗಾಲಕ್ಕೆ ಹೋಗಿ ಮಾರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಮದ್ದೂರಿನಲ್ಲೇ ಸ್ಥಾಪನೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸಂಬಂಧಪಟ್ಟ ಸಚಿವರನ್ನು ಸದನದಲ್ಲಿ ಒತ್ತಾಯ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಿಂಷಾ ನದಿ ಎಡಭಾಗದ ಬಹುತೇಕ ಜಮೀನುಗಳು ಮಳೆ ಆಶ್ರಿತ ಪ್ರದೇಶಗಳಾಗಿವೆ. ಕೃಷಿಕರು ಬೋರ್ ವೆಲ್ ನೀರು ಬಳಸಿಕೊಂಡು ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಷಾ ನದಿ ದಂಡೆ ಎಡಭಾಗದ ಜಮೀನುಗಳಿಗೆ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಆ ಭಾಗದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ನಿರಂತರವಾಗಿ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಸಚಿವರಿಗೆ ಸದನದಲ್ಲಿ ಮನವಿ ಮಾಡಲಾಗುವುದು ಎಂದರು.ಮದ್ದೂರು ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರು. ಅನುದಾನ ಕೋರಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲೂ ಸಹ ಅನುದಾನ ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಪುರಸಭೆಯಲ್ಲಿ ಇ-ಖಾತೆ ಹಗರಣ ಕೈ ಬಿಡುವ ಪ್ರಶ್ನೆ ಇಲ್ಲ: ಕೆ.ಎಂ.ಉದಯ್
ಕೃಷಿ ಜಮೀನುಗಳಿಗೆ ಅಕ್ರಮವಾಗಿ ಇ-ಖಾತೆ ಮಾಡಿರುವ ಹಗರಣವನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಕೆ.ಎಂ. ಉದಯ್ ಭಾನುವಾರ ಹೇಳಿದರು.
ಕೃಷಿ ಭೂಮಿಯನ್ನು ಅಕ್ರಮವಾಗಿ ಇ-ಖಾತೆ ಮಾಡಿರೋ ಬಗ್ಗೆ ನಾನು ಈ ಹಿಂದೆ ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪೌರಾಡಳಿತ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದೆ. ಈ ಹಿನ್ನೆಲೆಯಲ್ಲಿ ನಿರ್ದೇಶನಾಲಯದ ತನಿಖಾ ತಂಡ ಪುರಸಭೆಗೆ ಭೇಟಿ ನೀಡಿ ಅಕ್ರಮ ಇ-ಖಾತೆಗಳ ಕಡತ ಪರಿಶೀಲಿಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದರು.