ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪುರಸಭೆ ವ್ಯಾಪ್ತಿಯ ಸಿದ್ದಾರ್ಥ ನಗರ, ಚನ್ನೇಗೌಡ ಬಡಾವಣೆ ಹಾಗೂ ಕಾವೇರಿ ನಗರದಲ್ಲಿ ಅಮೃತನಗರ ಯೋಜನೆ ಅಡಿ ಬಿಡುಗಡೆಯಾಗಿರುವ 1.85 ಲಕ್ಷ ರು. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪಟ್ಟಣ ಒಳಗೊಂಡಂತೆ ಚಾಮನಹಳ್ಳಿ, ಸೋಮನಹಳ್ಳಿ ಗೊರವನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾಪಂಗಳನ್ನು ಮದ್ದೂರು ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡುವ ಮೂಲಕ ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಪೌರಾಡಳಿತ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ತಾವು ಸಲ್ಲಿಸಿರುವ ಪ್ರಸ್ತಾವನೆ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪೌರಾಡಳಿತ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ ಎಂದರು.
ಪಟ್ಟಣ ವ್ಯಾಪ್ತಿಯಲ್ಲಿ ಅಳವಡಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರ ಬ್ಯಾನರ್ ಗಳನ್ನು ಪುರಸಭೆ ಅಧಿಕಾರಿಗಳು ತೆರವು ಮಾಡುತ್ತಿರುವ ಬಗ್ಗೆ ನನ್ನ ಹಸ್ತಕ್ಷೇಪವಿಲ್ಲ. ಕೆಲವು ಪುಡಿ ರಾಜಕಾರಣಿಗಳು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.
ಈ ವೇಳೆ ಪುರಸಭಾ ಸದಸ್ಯರಾದ ಎಂ.ಬಿ.ಸಚಿನ್, ಸಿದ್ದರಾಜು, ಕಮಲಾನಾಥ, ಮನೋಜ, ಮಾಜಿ ಅಧ್ಯಕ್ಷ ಮನ್ಸೂರ್ ಖಾನ್, ಮಾಜಿ ಉಪಾಧ್ಯಕ್ಷ ಇಮ್ತಿಯಾಜ್ ಉಲ್ಲಾ ಖಾನ್, ಅಸ್ಲಾಂ, ಶಬಾನ, ಯಶ್ವಂತ, ಯತೀಶ್, ಪುರಸಭೆ ಮುಖ್ಯ ಅಧಿಕಾರಿ ಕರಿಬಸವಯ್ಯ ಮತ್ತಿತರರು ಇದ್ದರು.