ಧಾರವಾಡ:
ಈ ವೇಳೆ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಸರ್ಕಾರಗಳ ನೀತಿಗಳಿಂದ ರೈತರ ಬದುಕು ಅತ್ಯಂತ ದುಸ್ಥಿತಿಗೆ ಬಂದಿದ್ದು ಅವನ ಬೆನ್ನೆಲುಬನ್ನೇ ಮುರಿದುಹಾಕಿದೆ. ವ್ಯವಸಾಯವು ಇಂದು ಲಾಭರಹಿತ ಉದ್ದಿಮೆಯಾಗಿ ರೈತರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿ ಆತ್ಮಹತ್ಯೆಗೆ ಮೊರೆಹೋಗುವಂತೆ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೊಬ್ಬರ, ಬೀಜ, ಕೀಟನಾಶಕ, ರೈತರ ಸಲಕರಣೆ ಮತ್ತು ಯಂತ್ರಗಳ ಬೆಲೆಗಳು ದುಬಾರಿಯಾಗಿ ರೈತರ ಉತ್ಪಾದನಾ ವೆಚ್ಚ ಗಗನಕ್ಕೇರಿದೆ. ಆದರೆ, ರೈತನು ಬೆಳೆದ ಉತ್ಪನ್ನಕ್ಕೆ ಖಚಿತವಾದ ಸೂಕ್ತ ಬೆಲೆ ಸಿಗದೆ ನಿರಂತರ ನಷ್ಟವನ್ನು ಅನುಭವಿಸುತ್ತಲೇ ಇದ್ದಾರೆ. ಇದರ ಪರಿಣಾಮವಾಗಿ ರೈತರು ತನ್ನ ಭೂಮಿ ಮಾರಿಕೊಂಡು ಕೃಷಿ ಕಾರ್ಮಿಕನಾಗುತ್ತಿದ್ದಾನೆ. ಇದು ಮಾತ್ರವಲ್ಲದೆ ಹವಾಮಾನ ವೈಪರಿತ್ಯದಿಂದಾಗಿ ಕೆಲವೊಮ್ಮೆ ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಕಂಗಾಲಾಗಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ಜೀವನಗೈಯ್ಯಲು ಪಟ್ಟಣಗಳಿಗೆ ವಲಸೆ ಹೋಗಲೇಬೇಕಾದ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾನೆ ಎಂದು ಹೇಳಿದರು.ಆದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಸಂಘಟನೆ ಉಪಾಧ್ಯಕ್ಷ ಹನುಮೇಶ ಹುಡೇದ, ಸಮಿತಿ ಸದಸ್ಯರಾದ ಉಳವಪ್ಪ ಅಂಗಡಿ, ಮಲ್ಲಪ್ಪ, ರಸೂಲ ನದಾಫ್, ಬಸಮ್ಮ , ಶಿವಯ್ಯ ನಾಗಪ್ಪ ಸೇರಿದಂತೆ ಇತರರು ಇದ್ದರು.