ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ

KannadaprabhaNewsNetwork |  
Published : Dec 01, 2024, 01:32 AM IST
೩೦ಕೆಎಲ್‌ಆರ್-೧೧ಕೋಲಾರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-ಸಂಬಂಧ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಅಧ್ಯಕ್ಷ ಬಿ.ಎ.ಪಾಟೀಲ್ ಇದ್ದರು. | Kannada Prabha

ಸಾರಾಂಶ

ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.

ಕನ್ನಡಪ್ರಭ ವಾರ್ತೆ ಕೋಲಾರಸರ್ಕಾರದ ಭೂಮಿ ಸಂರಕ್ಷಣೆಗಾಗಿ ಎಷ್ಟೇ ಕಠಿಣವಾದ ಕಾನೂನುಗಳು ಜಾರಿಗೆ ತಂದರೂ ಸಹ ಒತ್ತುವರಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಅಧ್ಯಕ್ಷ ಬಿ.ಎ.ಪಾಟೀಲ್ ಕಳವಳ ವ್ಯಕ್ತಪಡಿಸಿದರು.ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತದಿಂದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಯಾವುದೇ ರೋಗ ಬರುವ ಮುನ್ನೆಚ್ಚರಿಕೆ ಕ್ರಮ ಅಗತ್ಯ ಇರುವಂತೆ ಸರ್ಕಾ ರಿ ಆಸ್ತಿಗಳು ಒತ್ತುವರಿಯಾಗದಂತೆ ಗುರುತಿಸಿ ಸಂರಕ್ಷಣಾ ಕ್ರಮಕೈಗೊಳ್ಳಬೇಕು ಎಂದರು. ಜನಜಾಗೃತಿ ಮೂಡಿಸಬೇಕು

ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಅಕ್ರಂಪಾಷ ಮಾತನಾಡಿ, ಸರ್ಕಾರಿ ಜಾಗ ೨ ಸಾವಿರ ಎಕರೆ ಒತ್ತುವರಿ ಅತ್ಯಂತ ಕಡಿಮೆ ಅವಧಿಯಲ್ಲಿ ತೆರವು ಮಾಡಿಸಿ ಸರ್ಕಾರದ ಸ್ವಾಧೀನಕ್ಕೆ ಒಪ್ಪಿಸುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿರುವುದು ಅಭಿನಂದನಾರ್ಹ. ಯಾವುದೇ ಸರ್ಕಾರಿ ಜಾಗವನ್ನು ಸಂರಕ್ಷಿಸಿ ಸರ್ಕಾರದ ಸ್ವಾಧೀನದಲ್ಲಿರುವಂತೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ವಾಗಿದೆ, ಸರ್ಕಾರಿ ಜಾಗವನ್ನು ಒತ್ತುವರಿ ಮಾಡದಂತೆ ಮಕ್ಕಳಂತೆ ಸಂರಕ್ಷಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧಿಕಾರಿ ಸ್ವೀಕರಿಸುತ್ತಿಲ್ಲ

ಜಿಲ್ಲೆಯಲ್ಲಿ ಶೇ.೨೦ರಿಂದ ೩೦ರಷ್ಟು ಹುದ್ದೆಗಳು ಖಾಲಿ ಇದೆ. ಸರ್ವೇಯರ್ ಕೊರತೆ ಬಹು ದಿನಾಗಳಿಂದ ಇದೆ. ಕೋಲಾರಕ್ಕೆ ನೇಮಕಾತಿಗೊಂಡವರು ಅಧಿಕಾರ ಸ್ವೀಕಾರ ಮಾಡದೆ ಪಲಾಯನ ಮಾಡುತ್ತಿರುವುದು ಕಳವಳಕಾರಿ. ಇಷ್ಟೇಲ್ಲಾ ಒತ್ತಡಗಳ ನಡುವೆಯೂ ೭೧ ಸಾವಿರ ಅರ್ಜಿಗಳು ಸಕಾಲದಲ್ಲಿ ನಿಗದಿತ ಅವಧಿಗೆ ಮೂದಲೇ ವಿಲೇ ಮಾಡಲಾಗಿದೆ. ರಾಜ್ಯದಲ್ಲಿ ನಂಬರ್ ಓನ್ ಸ್ಥಾನಕ್ಕೆ ಬರಲು ಅಧಿಕಾರಿಗಳ ಪರಿಶ್ರಮವೇ ಕಾರಣ ಎಂದು ಶ್ಲಾಘಿಸಿದರು.

ಕಾರ್ಯಾಗಾರದ ಪ್ರಥಮ ಅಧಿವೇಶನದಲ್ಲಿ ಕರ್ನಾಟಕ ಭೂಕಬಳಿಕೆ ನಿಷೇಧ ಅಧಿನಿಯಮ ೨೦೧೧ ಮತ್ತು ತಿದ್ದುಪಡಿ ಕಾಯ್ದೆ ಕುರಿತು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಉಪನ್ಯಾಸ ನೀಡಿದರು.ಭೂ ದಾಖಲೆಗಳ ಉಪನಿರ್ದೇಶಕ ಬಿ.ಕೆ.ಸಂಜಯ್, ಕಂದಾಯ ಸದಸ್ಯ ಎಸ್.ಪಾಲಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ್ ಎಸ್.ಎಂ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಕೆ.ನವೀನ್, ಕಂದಾಯ ಸದಸ್ಯ ಅಶ್ವಥ್ ನಾರಾಯಣಗೌಡ, ಡಿಎಫ್‌ಓ ಏಡುಕೊಂಡಲು, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ. ಇದ್ದರು. ಎಡಿಸಿ ಮಂಗಳಾ ಸ್ವಾಗತಿಸಿದರು.

PREV

Recommended Stories

ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
ಕನಕಪುರದಲ್ಲಿ ವೈದ್ಯ ಕಾಲೇಜಿಗೆ ಭೂಮಿ ಖರೀದಿಗೆ ಹಣ ಮಂಜೂರು