ಕನ್ನಡಪ್ರಭವಾರ್ತೆ ಚಿಕ್ಕಮಗಳೂರು
ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ವಿಜಯಪುರ ಸಮೀಪ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪದಂತೆ ''''ತಾಯಿಗೊಂದು ಗಿಡ’ ನೆಡುವ ಕಾರ್ಯಕ್ರಮದಲ್ಲಿ ಭಾನುವಾರ ಮುಂಜಾನೆ ಪಾಲ್ಗೊಂಡು ಅವರು ಮಾತನಾಡಿದರು.
ಪರಿಸರಕ್ಕೆ ಪೂರಕವಾಗಿರುವ ತೆಂಗು, ಮಾವು, ನೇರಳೆ, ಹೊಂಗೆ ಸೇರಿದಂತೆ ವಿವಿಧ ತಳಿಗಳ ಸಸಿಗಳನ್ನು ಪೋಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಇಂದಿನಿಂದಲೇ ಮುಂದಾಗಬೇಕು ಎಂದು ತಿಳಿಸಿದರು.ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ನಿವಾಸಿಗಳು ಮನೆಗೊಂದು ಗಿಡ ನೆಡುವ ಕಾರ್ಯಕ್ಕೆ ಮುಂದಾದರೆ ದೇಶವು ಕಲ್ಪವೃಕ್ಷಗಳ ನಾಡಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಪೋಷಕರು ಮಕ್ಕಳ ಹಾಗೂ ದೇಶದ ಭವಿಷ್ಯದ ದೃಷ್ಟಿಯಿಂದ ಪರಿಸರದ ಕಾಳಜಿ ಮೂಡಿಸಿಕೊಳ್ಳಬೇಕು ಎಂದರು.ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ ಮಾತನಾಡಿ, ಪ್ರಧಾನ ಮಂತ್ರಿ ಆಶಯದಂತೆ ಗಿಡ ಕಾರ್ಯಕ್ರಮ ಹಮ್ಮಿಕೊಂಡಿರುವುದು ಖುಷಿಯ ಸಂಗತಿ. ಜೊತೆಗೆ ದೇಶಕ್ಕಾಗಿ ಜೀವನ ಮುಡಿಪಿಟ್ಟು ಜನಸಂಘ ಸ್ಥಾಪನೆಗೆ ಶ್ರಮಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.ಮುಖರ್ಜಿ ರಾಷ್ಟ್ರಕ್ಕಾಗಿ ಕೈಗೊಂಡಂತಹ ಕ್ರೀಯಾಶೀಲ ಕಾರ್ಯಗಳು, ಚಿಂತನೆಗಳು ಅವಿಸ್ಮರಣೀಯ. ದೇಶದ ಐಕ್ಯತೆಗಾಗಿ ಮುಖರ್ಜಿ ಬದುಕನ್ನು ಮುಡಿಪಿಟ್ಟವರು. ರಾಜಕೀಯ ಮುತ್ಸದ್ದಿ ಯಾವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂಬುದಕ್ಕೆ ಮಾದರಿಯಾಗಿದ್ದರು. ಇಂದಿನ ಯುವ ಪೀಳಿಗೆ ಅವರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಇಂದು ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರವು ಯಥೇಚ್ಛವಾಗಿ ಮಲಿನವಾಗುತ್ತಿದೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ನಾಗರಿಕರು ಕೈಜೋಡಿಸಬೇಕು ಎಂದು ಹೇಳಿದರು.