ಕನ್ನಡಪ್ರಭ ವಾರ್ತೆ ಕೋಲಾರಮರ ಗಿಡಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರ ನಿರ್ಮಾಣವಾಗಲಿದ್ದು, ಮಾನವ ಸೇರಿದಂತೆ ಜೀವಸಂಕೋಲಗಳ ಆರೋಗ್ಯಕರ ಬದುಕಿಗೆ ಪೂರಕವಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್ ಅಭಿಪ್ರಾಯಪಟ್ಟರು.ನಗರದ ಕಾರಂಜಿ ಕಟ್ಟೆಯ ಸುಭಾಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕೋಲಾರ ಜಿಲ್ಲಾ ವಕೀಲ ಸಂಘದಿಂದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅವಕಾಶ ಇರುವಲ್ಲಿ ಸಸಿ ಬೆಳೆಸಿ
ಕಾನೂನು ಅರಿವಿನ ಕೊರತೆ
ಇತ್ತೀಚೆಗೆ ಕಾರಾಗೃಹಕ್ಕೆ ಭೇಟಿ ನೀಡಿದಾಗ ಸುಮಾರು ೪೦-೪೫ ಮಂದಿ ಪೋಕ್ಸೋ ಪ್ರಕರಣದ ಆರೋಪಿಗಳಿದ್ದರು. ಅವರಿಗೆ ಕಾನೂನಿನ ಅರಿವಿನ ಕೊರತೆಯಿಂದ ಈ ಶಿಕ್ಷೆಗೆ ಗುರಿಯಾಗಿದ್ದರು. ಇದರ ಜೂತೆಗೆ ಪೋಷಕರಿಗೂ ಶಿಕ್ಷೆ ತಪ್ಪಿದ್ದಲ್ಲ, ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್ ಬಳಕೆ ಪ್ರತಿಯೊಬ್ಬರಿಗೂ ಅನಿವಾರ್ಯವಾಗಿದೆ. ಇದರಿಂದ ಸಾಕಷ್ಠು ಪ್ರಯೋಜನಕಾರಿಯಾಗಿದೆ ಅಷ್ಟೇ ಅಪಾಯಕಾರಿಯಾಗಿದೆ. ಮೊಬೈಲ್ ಬಳಕೆಯಲ್ಲಿ ಇತಿಮಿತಿ ಇರಬೇಕು ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದಲ್ಲಿ ವಕೀಲರಾದ ಸತೀಶ್, ಸೋಮಶೇಖರ್, ಸಮಾಜ ಸೇವಕ ಶಿವಕುಮಾರ್ಗೌಡ ಇದ್ದರು.