ಸಂವಿಧಾನದ ಆಶಯಗಳ ರಕ್ಷಣೆ ನಮ್ಮ ಹೊಣೆ: ಬೇಳೂರು

KannadaprabhaNewsNetwork |  
Published : Sep 16, 2026, 01:30 AM IST
ಬೇಳೂರು ಮಾತನಾಡಿದರು | Kannada Prabha

ಸಾರಾಂಶ

Protecting the ideals of the Constitution is our responsibility: Belur

ಸಾಗರ: ಪ್ರಜಾಪ್ರಭುತ್ವದ ಮೌಲ್ಯ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿ ನಿಲ್ಲುವ ಅಡಿಪಾಯ ಎಂದರು.

ಸಂವಿಧಾನದ ಆಶಯಗಳನ್ನು ನಾವು ರಕ್ಷಣೆ ಮಾಡಿದಷ್ಟು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗುತ್ತದೆ. ಹಕ್ಕುಗಳನ್ನು ಪ್ರತಿಪಾದಿಸುವ ಜೊತೆಗೆ ಕರ್ತವ್ಯ ಪರಿಪಾಲನೆ ಬಗ್ಗೆ ಸಹ ಗಮನಹರಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾದಷ್ಟು ಸೌಲಭ್ಯ ಪಡೆಯಲು ಅವಕಾಶವಾಗುತ್ತದೆ ಎಂದರು.

ರಾಜ್ಯ ಸರ್ಕಾರವು ಪ್ರಜಾಪ್ರಭುತ್ವದ ಮಹತ್ಮ, ಮೌಲ್ಯ ಮತ್ತು ಜನರ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ನಡೆಸುತ್ತಿದೆ. ಇದು ಜನರ ಏಕತೆ ಕಾಪಾಡಲು ಸರ್ಕಾರ ನೀಡಿದ ಅವಕಾಶವಾಗಿದ್ದು, ಸಮಾನತೆ ಸಾಧಿಸಲು ಪ್ರಜಾಪ್ರಭುತ್ವ ವ್ಯವಸ್ಥೆ ಅಗತ್ಯ ಎಂದು ಹೇಳಿದರು.

ನ್ಯಾಯವಾದಿ ಜ್ಯೋತಿ ಆನಂದ್ ಉಪನ್ಯಾಸ ನೀಡಿದರು. ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮೌನೇಶ್ ಬಡಿಗೇರ್, ಸಮಾಜ ಕಲ್ಯಾಣಾಧಿಕಾರಿ ಸುರೇಶ್, ಸಹನ ಇದ್ದರು.

ಫೋಟೊ: ೧೫ಕೆ.ಎಸ್.ಎ.ಜಿ.೧

ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಬೇಳೂರು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂದೇ ಮಾತರಂ 6 ಚರಣ ಹಾಡಲು ಬಿಜೆಪಿ ಆಗ್ರಹ
ಒಂದು ವಾರದ ಗಣೇಶೋತ್ಸವಕ್ಕೆ ಶಾಸಕ ಉದಯ್‌ ಚಾಲನೆ