ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಬುಧವಾರ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಮಾಜಿಕ ಜಾಲತಾಣ ಯುಗದಲ್ಲಿ ಸಿಸಿಟಿವಿ, ವಾಯ್ಸ್ ರೆಕಾರ್ಡ್, ವೀಡಿಯೋ ರೆಕಾರ್ಡ್, ಕಾಲ್ ರೆಕಾರ್ಡ್, ಹೀಗೆ ಹಲವು ಜಾಲತಾಣಗಳನ್ನು ಸಾಕ್ಷಿಯಾಗಿ ಪರಿಗಣಿಸಿ ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಒಂದೆಡೆಯಾದರೆ, ತಿಳಿದೋ ತಿಳಿಯದೆ ಘಟನೆಗಳು ಆದಾಗ ಅದನ್ನೇ ನೆಪವಾಗಿ ಇಟ್ಟುಕೊಂಡು ಮಾನವರನ್ನು ಪೀಡಿಸುವುದು ಅಥವಾ ಸತಾಯಿಸುವುದು ಸಹ ಕಂಡುಬರುತ್ತದೆ. ಆದ್ದರಿಂದ ಮಾನವರ ವೈಯಕ್ತಿಕ ಹಕ್ಕುಗಳ ಜತೆಗೆ ಇತರರ ಹಕ್ಕುಗಳನ್ನು ಸಂರಕ್ಷಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದು ಶುಭ ಅವರು ಪ್ರತಿಪಾದಿಸಿದರು.ನ್ಯಾಯ ಕಲ್ಪಿಸಲಾಗುವುದು:
ಪ್ರತಿಯೊಬ್ಬ ಮನುಷ್ಯರು ವಿಶೇಷ ವ್ಯಕ್ತಿಯಾಗಿದ್ದು, ತನ್ನದೇ ಆದ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೊಂದಿದ್ದಾರೆ. ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎಂಬ ಕವಿವಾಣಿಯಂತೆ ಎಲ್ಲಾ ಮಾನವರು ಮುಕ್ತ ಮತ್ತು ಸಮಾನವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.
ರಾಷ್ಟ್ರದ 150 ಕೋಟಿ ಜನರಲ್ಲಿ ಸಮಾನ ಅವಕಾಶ ಕಲ್ಪಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಮಾನವ ಜನ್ಮ ದೊಡ್ಡದು ಎಂಬಂತೆ, ಮಾನವ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ದೊರಕಬೇಕು ಎಂದರು.
ಸಮಾಜದಲ್ಲಿ ಒಂದೇ ಬಾರಿ ಬದಲಾವಣೆ ಅಸಾಧ್ಯ. ಆದರೂ ಒಬ್ಬೊಬ್ಬರು ಪರಿವರ್ತನೆ ಆದಾಗ ಇಡೀ ಸಮಾಜ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದರು.
ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಒಂದು ಒಳ್ಳೆಯ ಹಾಗೂ ಅರ್ಥಪೂರ್ಣ ಜೀವನ ನಡೆಸಲು ಬೇಕಾದ ಮೂಲಭೂತ ಅಗತ್ಯತೆಗಳನ್ನು ಖಾತರಿಗೊಳಿಸುತ್ತದೆ ಎಂದು ಅವರು ತಿಳಿಸಿದರು.
ಮಾನವ ಹಕ್ಕು ಸಂರಕ್ಷಿಸಬಹುದಾಗಿದೆ:
ಭಾರತ ಸಂವಿಧಾನಕ್ಕೆ ಸಂಪೂರ್ಣ ನಂಬಿಕೆ ಮತ್ತು ನಿಷ್ಠೆ ಹೊಂದಿದ್ದೇನೆ, ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಉತ್ತೇಜಿಸುವಲ್ಲಿ ಎಲ್ಲಾ ಕರ್ತವ್ಯಗಳನ್ನು ಸಂವಿಧಾನತ್ಮಕವಾಗಿ ನಿರ್ವಹಿಸುತ್ತೇನೆ. ಯಾವುದೇ ತಾರತಮ್ಯ ಇಲ್ಲದೆ ಏನೇ ಆದರೂ ಎಲ್ಲಾ ಮಾನವ ಜೀವಿಗಳ ಹಕ್ಕುಗಳನ್ನು ಗೌರವಿಸುತ್ತೇನೆ ಮತ್ತು ಎತ್ತಿ ಹಿಡಿಯುತ್ತೇವೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನನ್ನ ವಿಚಾರಗಳಿಂದ, ಮಾತುಗಳಿಂದ ಅಥವಾ ನಡವಳಿಕೆಯಿಂದ ಬೇರೆಯವರ ಮಾನವ ಹಕ್ಕು ಉಲ್ಲಂಘಿಸುವುದಿಲ್ಲ ಎಂದು ಉಪ ವಿಭಾಗಾಧಿಕಾರಿ ಪ್ರತಿಜ್ಞಾ ವಿಧಿ ಬೋಧಿಸಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿ.ಪಂ.ಎಂಜಿನಿಯರ್ ನಾಯಕ್, ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕರಾದ ಮಮತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಧುಕರ, ಮಹೇಶ್, ವಿವಿಧ ಇಲಾಖೆ ಸಿಬ್ಬಂದಿ ಇತರರು ಇದ್ದರು.