ಭೂಮಿ, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ದೇವರೆಡ್ಡಿ

KannadaprabhaNewsNetwork |  
Published : Apr 23, 2024, 12:56 AM IST
ಸದಸಸ | Kannada Prabha

ಸಾರಾಂಶ

ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಭೂಮಿಯ ಮೇಲಿನ ಪರಿಸರ ಹಾಳಾಗಲು ಪ್ರಮುಖ ಕಾರಣವಾಗಿದೆ.

ಸಂಡೂರು: ಜೀವ ಜಗತ್ತಿಗೆ ಆಧಾರವಾದ ಭೂಮಿ, ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಂಡೂರಿನ ನ್ಯಾಯಾಲಯದ ನ್ಯಾಯಾಧೀಶ ದೇವರೆಡ್ಡಿ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭೂಮಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಭೂಮಿಯ ಮೇಲಿನ ಪರಿಸರ ಹಾಳಾಗಲು ಪ್ರಮುಖ ಕಾರಣವಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಬೇಕಿದೆ. ಅರಣ್ಯ ನಾಳದಿಂದ ತಾಪಮಾನ ಹೆಚ್ಚುತ್ತಿದೆ. ಪರಿಸರ ಮಾಲಿನ್ಯವನ್ನು ತಡೆಗಟ್ಟಬೇಕಿದೆ. ಈ ಕುರಿತು ಜನರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದರು.

ವಕೀಲರಾದ ನಾಗರಾಜ ಗುಡೆಕೋಟೆ ಉಪನ್ಯಾಸ ನೀಡಿ, ಭೂಮಿಯ ಮೇಲಿನ ವಾತಾವರಣ, ಗಾಳಿ, ನೀರು ಕಲುಷಿತವಾಗಲು ಪರಿಸರ ನಾಶ ಕಾರಣವಾಗಿದೆ. ಜನತೆ ಜಾಗೃತರಾಗಿ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಪರಿಸರವನ್ನು ಸಂರಕ್ಷಣೆ ಮಾಡದಿದ್ದರೆ, ಸಂಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ವಿವರಿಸಿದರು.

ವಕೀಲ ಆರ್.ವೀರೇಶಪ್ಪ ಮಾತನಾಡಿ, ಜೀವ ಸಂಕುಲಕ್ಕೆ ಇರುವುದೊಂದೇ ಭೂಮಿ. ಜನಸಂಖ್ಯಾ ಹೆಚ್ಚಳದಿಂದ ಭೂಮಿಯ ಮೇಲೆ ಒತ್ತಡ ಹೆಚ್ಚುತ್ತಿದೆ. ಮಾನವನ ದುರಾಸೆಗೆ ಕಡಿವಾಣ ಹಾಕಬೇಕಿದೆ. ಜನಸಂಖೆಯನ್ನು ನಿಯಂತ್ರಿಸುವುದು ಅಗತ್ಯವಿದೆ. ಭೂಮಿಯ ಮೇಲಿನ ಪರಿಸರವನ್ನು ಸಂರಕ್ಷಿಸಲು ಎಲ್ಲರೂ ಶ್ರಮಿಸುವುದು ಅಗತ್ಯವಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿ.ಎಸ್. ಮಂಜುನಾಥ್ ಪ್ರಾರ್ಥನೆ ಸಲ್ಲಿಸಿದರು. ಅಂಜಿನಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್. ರಾಜಶೇಖರ್ ವಂದಿಸಿದರು. ವಕೀಲರಾದ ಎಚ್.ಕೆ. ಬಸವರಾಜ, ಕಣ್ಣಿ ಕುಮಾರಸ್ವಾಮಿ, ಮಹಾರುದ್ರಪ್ಪ, ಅಂಜಿನಿ ಸೇರಿದಂತೆ ಹಲವು ವಕೀಲರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು