ಕನ್ನಡಪ್ರಭ ವಾರ್ತೆ ಬೇಲೂರು ಪಟ್ಟಣದ ರಾಯಪುರ ಮಗ್ಗೆ ಗೇಟ್ ಬಳಿ ಅಕ್ರಮವಾಗಿ ಹಾಸನದ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಕರು ಸೇರಿದಂತೆ ಜಾನುವಾರುಗಳನ್ನು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮತ್ತು ಪೊಲೀಸರು ರಕ್ಷಿಸಿದರು.
ವಾಹನದ ಸಮೇತ ಜಪ್ತಿ ಮಾಡಿ ಚಾಲಕ ಖಲೀಲ್ ಪಾಷ ಎಂಬಾತನನ್ನು ಬಂಧಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನಂತರ ಜಾನುವಾರುಗಳನ್ನು ಗೋ ಶಾಲೆಗೆ ಕಳುಹಿಸಿಕೊಡಲಾಗುತ್ತದೆ ಎಂದರು.
ಈ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಧಾನ ಸಂಚಾಲಕ ನಾಗೇಶ್ (ಗುಂಡ), ಈಗಾಗಲೇ ಹಲವಾರು ಬಾರಿ ಗೋವುಗಳನ್ನು ಕಸಾಯಿಖಾನೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದ್ದು, ಪೋಲಿಸ್ ಇಲಾಖೆ ಪುರಸಭೆ ಹಾಗೂ ಕಂದಾಯ ಇಲಾಖೆಗಳು ಪ್ರತಿ ಬಾರಿ ತಿಂಗಳಿಗೊಮ್ಮೆ ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಗೋ ಮಾಂಸ ಹಾಗೂ ಗೋವುಗಳನ್ನು ರಕ್ಷಣೆ ಮಾಡುತ್ತಿದೆ. ಆದರೂ ವ್ಯಾಪಕವಾಗಿ ಕದ್ದುಮುಚ್ಚಿ ಇಂತಹ ಪ್ರಕರಣಗಳು ದಾಖಲಾಗುತ್ತಿದೆ. ಇವುಗಳ ಮೇಲೆ ಹೆಚ್ಚಿನ ರೀತಿಯಲ್ಲಿ ಕಾನೂನು ಜಾರಿಯಾಗಬೇಕು ಎಂದರು.ದಾಳಿ ಸಂದರ್ಭದಲ್ಲಿ ಪೊಲೀಸ್ ಇಲಾಖೆ ದೇವರಾಜು, ದೇವೇಂದ್ರ, ಅಣ್ಣಪ್ಪ, ವಿಶ್ವ ಹಿಂದೂಪರಿಷತ್ ಕಾರ್ಯಕರ್ತರು ಹಾಜರಿದ್ದರು.