ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದರು.
ಕಳಸಾ ಬಂಡೂರಿ ಯೋಜನೆ ವಿಳಂಬಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮನೋಹರ್ ಪರಿಕರ ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದ್ದೆ. ಅವರ ಮನವೋಲಿಕೆ ಕೂಡ ಆಗಿತ್ತು. ಆದರೆ ಆಗ ಗೋವಾ ಕಾಂಗ್ರೆಸ್ನವರೇ ವಿರೋಧಿಸಿದ್ದರು. ಅಲ್ಲಿನ ಕಾಂಗ್ರೆಸ್ ನಾಯಕರಿಗೆ ತಿಳಿಸಿ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರಿಗೂ ಹೇಳಿದ್ದೆ ಎಂದರು.ಕೆಲವರಿಂದಾಗಿ ಇದು ವಿಳಂಬವಾಗುತ್ತಿದ್ದು, ಅದನ್ನು ಸರಿ ಮಾಡುವ ಕೆಲಸ ಮಾಡುತ್ತೇವೆ. ಗೋವಾ ವಿದ್ಯುತ್ ಯೋಜನೆಗೆ ಅರಣ್ಯ ನಾಶವಾಗುತ್ತದೆಯೆಲ್ಲ ಎಂಬ ಪ್ರಶ್ನೆಗೆ ಇದೇ ಮಾಹಿತಿ ಇಟ್ಟುಕೊಂಡು ನಾವು ಫೈಟ್ ಮಾಡಬೇಕು. ವಿದ್ಯುತ್ ಯೋಜನೆಗೆ ಅನುಮತಿ ಕೊಡುವುದಾದರೆ, ಮಹದಾಯಿ ಯೋಜನೆಗೆ ಅನುಮತಿ ಬೇಡಿಕೆ ಇಡುತ್ತೇವೆ ಎಂದರು.
ಮೊನ್ನೆ ಖಾಸಗಿ ಹೋಟೆಲ್ನಲ್ಲಿ ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡರ ಸಭೆ ನಡೆದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲಮುಖಂಡರನ್ನು ಮರುಸೇರ್ಪಡೆ ಕುರಿತು ಚರ್ಚೆ ನಡೆದಿದೆ. ನಾಳೆ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ 90ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಎಲ್ಲ ವಿವಾದಕ್ಕೂ ತೆರೆಬೀಳಲಿದೆ ಎಂದರು.