ಕಾರ್ಮಿಕರ ರಕ್ಷಣೆ ಸರ್ಕಾರದ ಜವಾಬ್ದಾರಿ

KannadaprabhaNewsNetwork |  
Published : Jan 13, 2025, 12:45 AM IST
5 | Kannada Prabha

ಸಾರಾಂಶ

ಮೊದಲು ಡಾ. ಅಂಬೇಡ್ಕರ್ ಎಂದರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮಾತ್ರ ಎಂಬ ಪೂರ್ವಗ್ರಹ ಮನಸ್ಥಿತಿ ಇತ್ತು.

ಕನ್ನಡಪ್ರಭ ವಾರ್ತೆ ಮೈಸೂರು

ಕಾರ್ಮಿಕರ ರಕ್ಷಣೆ ಸರ್ಕಾರದ ಜವಾಬ್ದಾರಿ. ಹೀಗಾಗಿ, ಕಾರ್ಮಿಕರಿಗೆ ವೇತನ ನಿಗದಿ, ಆರೋಗ್ಯ ಸೇವೆ, ಕಲ್ಯಾಣ ಕಾರ್ಯಕ್ರಮಗಳನ್ನು ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ನಗರದ ಜೆ.ಕೆ. ಮೈದಾನದ ಎಂಎಂಸಿ ಭವನದಲ್ಲಿ ಭಾನುವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳಿಗೆ ಟೂಲ್ ಕಿಟ್ ವಿತರಣೆ, ಮಾಹಿತಿ ಶಿಕ್ಷಣ ಸಂವಹನ ಜಾಗೃತಿ ಮತ್ತು ಪ್ರಚಾರ ಚಟುವಟಿಕೆ, ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.

ಮೊದಲು ಡಾ. ಅಂಬೇಡ್ಕರ್ ಎಂದರೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮಾತ್ರ ಎಂಬ ಪೂರ್ವಗ್ರಹ ಮನಸ್ಥಿತಿ ಇತ್ತು. ಆದರೆ, ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಸ್ವಾಭಿಮಾನದ ಬದುಕನ್ನು ನೀಡಿದೆ. ಈ ಕಾರಣಕ್ಕೆ ಇವತ್ತು ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ಕೊಡುತ್ತಿದ್ದಾರೆ. ಇಡೀ ದೇಶವನ್ನು ಕಟ್ಟುವುದು ಹೇಗೆ ಎಂಬುದನ್ನು ಸಂವಿಧಾನ ತಿಳಿಸಿದೆ. ಹೀಗಾಗಿ, ಸಂವಿಧಾನ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ನಾವು ಸಂವಿಧಾನ ರಕ್ಷಣೆ ಮಾಡಿದರೆ, ಸಂವಿಧಾನ ನಮ್ಮನ್ನು ರಕ್ಷಣೆ ಮಾಡಲಿದೆ ಎಂದು ಅವರು ಹೇಳಿದರು.

ಮೈಸೂರಿನ ನಿರ್ಮಾಣದಲ್ಲಿ ಕಟ್ಟಡ ಕಾರ್ಮಿಕರು ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರತಿನಿತ್ಯ ದುಡಿದ ಹಣದಲ್ಲಿ ಜೀವನ ನಡೆಸಬೇಕು. ಹೀಗಾಗಿ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ ಕೊಡಿಸುವುದು ಬಹಳ ಕಷ್ಟವಾಗಲಿದೆ. ಅದರಲ್ಲಿಯೂ ಕೊರೋನಾ ಸಂದರ್ಭದಲ್ಲಿ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನಭಾಗ್ಯ ಕಾರ್ಮಿಕರನ್ನು ಸಂಕಷ್ಟದಿಂದ ಪಾರು ಮಾಡಿತು ಎಂದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಕಾಳಜಿ ವಹಿಸಿ ಸಚಿವ ಸಂಪುಟದಲ್ಲಿ ಅನೇಕ ಯೋಜನೆ ಯೋಜನೆಗಳಿಗೆ ಅನುಮೋದನೆ ದೊರೆಕಿಸಿದ್ದಾರೆ. ಆರೋಗ್ಯ, ಮಕ್ಕಳ ಶಿಕ್ಷಣ, ಕಲ್ಯಾಣ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ಹೀಗಾಗಿ ಪ್ರತಿಯೊಬ್ಬ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಅವರು ತಿಳಿಸಿದರು.

ಕಾರ್ಮಿಕ ಇಲಾಖೆ ಹೆಚ್ಚುವರಿ ಕಾರ್ಮಿಕ ಆಯುಕ್ತ ಎಸ್.ಟಿ. ರವಿಕುವಾರ್ ಮಾತನಾಡಿ, ಪ್ರತ್ಯೇಕ ಕಟ್ಟಡ ಕಾರ್ಮಿಕರ ಮಂಡಳಿಯಿಂದ ಕಾರ್ಮಿಕರಿಗೆ ಹಲವಾರು ಯೋಜನೆಗಳನ್ನು ನೀಡಲಾಗುತ್ತಿದೆ. ಮೈಸೂರಿನಲ್ಲಿ 50 ಸಾವಿರ ಜನರಿಗೆ ಪರಿಹಾರ ವಿತರಿಸಲಾಗಿದೆ ಎಂದರು.

ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಎಸ್.ಆರ್. ವೀಣಾ, ಪ್ರಚಾರ ಮತ್ತು ಅಂಕಿ ಅಂಶ ಇಲಾಖೆ ಉಪ ಆಯುಕ್ತ ಡಿ.ಜಿ. ನಾಗೇಶ್, ಹಿರಿಯ ಕಾರ್ಮಿಕ ನಿರೀಕ್ಷಿಕರಾದ ಮಾದಪ್ಪ, ಜಯಣ್ಣ, ಮಂಗಳಗೌರಮ್ಮ, ಲಕ್ಷ್ಮೀಶ್, ಎನ್. ಮಂಜುನಾಥ್, ಅಂಬಿಕಾ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌