ಅಂಜಲಿ ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : May 19, 2024, 01:47 AM IST
ಜೇವರ್ಗಿ : ಹುಬ್ಬಳಿಯ ಹಿರಪೂರ್ ಗಲ್ಲಿಯ ಅಂಜಲಿ ಅಂಬಿಗೇರ    ಎಂಬ ತರುಣಿಯನ್ನು  ಹತ್ಯೆ ಮಾಡಿದ  ಆರೋಪಿಗಳನ್ನು ಮರಣ ದಂಡನೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿ  ಕೋಲಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ  ತಹಶೀಲ್ದಾರ ಮಲ್ಲಣ್ಣ ಯಲಗೋಡ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.ಶೋಭಾ ಭಾಣಿ, ಮರೆಪ್ಪ ಬಡಿಗೇರ, ರಾಜು ತಳವಾರ, ಭಗವಂತರಾಯ ಬೆಣ್ಣೂರ, ಭೀಮರಾಯ ಜನಿವಾರ, ಗಿರೀಶ ತುಂಬಗಿ ಇದ್ದರು. | Kannada Prabha

ಸಾರಾಂಶ

ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ನಗರದಲ್ಲಿ ಮತ್ತೋಂದು ಕೊಲೆ ಪ್ರಕರಣ ನಡೆದಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರಲು ಹಿಂಜರಿಯುವಂತ್ತಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕನ್ನಡಪ್ರಭ ವಾರ್ತೆ ಜೇವರ್ಗಿ

ಹುಬ್ಬಳ್ಳಿ ನಗರದ ಅಂಜಲಿ ಅಂಬಿಗೇರ ಕೊಲೆಗೈದ ಆರೋಪಿಯನ್ನು ಮರಣ ದಂಡನೆ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿ ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕಿನ ಕೊಲಿ ಸಮಾಜದಿಂದ ಪ್ರತಿಭಟನೆ ಮರವಣಿಗೆ ನಡೆಸಿ ತಹಸೀಲ್ದಾರ್‌ ಮಲ್ಲಣ್ಣ ಯಲಗೋಡ ಅವರ ಮುಖಾಂತರ ಸಿಎಂ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಶೋಭಾ ಬಾಣಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲದಂತಾಗಿದೆ. ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ನಗರದಲ್ಲಿ ಮತ್ತೋಂದು ಕೊಲೆ ಪ್ರಕರಣ ನಡೆದಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಬರಲು ಹಿಂಜರಿಯುವಂತ್ತಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.

ಸರ್ಕಾರ ಕೇವಲ ಗ್ಯಾರಂಟಿಗಳನ್ನು ಹೇಳುತ್ತಿದ್ದು ಮಹಿಳೆಯರ ರಕ್ಷಣೆಗೆ ಗ್ಯಾರಂಟಿ ಕೊಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮರೆಪ್ಪ ಬಡಿಗೇರ ಭಗವಂತರಾಯ ಬೆಣ್ಣೂರ, ರಾಜು ತಳವಾರ, ಭೀಮರಾಯ ಜನಿವಾರ, ಬಾಬು ಪಾಟೀಲ, ಕಾಂತಪ್ಪ ಪೂಜಾರಿ, ಭೀಮರಾಯ ಮುತ್ತಕೊಡ, ಅಂಜಲಿ ಕೊರಬಾ, ಭಾಗೇಶ ಹೋತಿನಮಡು, ಮಲ್ಲಿಕಾರ್ಜುನ ಕುಸ್ತಿ, ಶಿವಪುತ್ರಪ್ಪ ಕೊಣಿನ, ಗುರು ಜೈನಾಪುರ ಸೇರಿದಂತೆ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕೋಲಿ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ