ಕನ್ನಡಪ್ರಭ ವಾರ್ತೆ ಹನೂರು
ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಮೇಲ್ಭಾಗದಲ್ಲಿ ಹೊಸ ಗೋಪುರ ನಿರ್ಮಾಣ ಮಾಡುವ ಸಂದರ್ಭದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ಇಮ್ಮಡಿ ಮಹದೇವಸ್ವಾಮಿ ಹಾಗೂ ಈತನ ಸಹಚರರು ವಿಷ ಬೆರೆಸಿದ್ದರು.
ಬಿದರಹಳ್ಳಿ, ದೊಡ್ಡಾಣೆ, ಎಂ ಜಿ ದೊಡ್ಡಿ, ಸುಳ್ವಾಡಿ ಸೇರಿದಂತೆ ಸುತ್ತಮುತ್ತಲಿನ ಭಕ್ತಾದಿಗಳು ಹಾಗೂ ಓಂ ಶಕ್ತಿ ಮಾಲಾಧಾರಿಗಳು ಪ್ರಸಾದ ಸ್ವೀಕರಿಸಿ 17ಕ್ಕೂ ಹೆಚ್ಚು ಜನರು ಮತಪಟ್ಟಿದ್ದಲ್ಲದೆ 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಇನ್ನು ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ಕಳೆದ ಆರು ವರ್ಷ 10 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಬಾರಿ ಆರೋಪಿಗಳು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾ ಮಾಡಲಾಗಿತ್ತು.
ವಿಷ ಪ್ರಸಾದ ಭಾದಿತರು ಮಾತನಾಡಿ, ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಪ್ರಕರಣದ ಮೊದಲ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಈ ಜಾಮೀನು ಮಂಜೂರಿನಲ್ಲಿ ಯಾವೆಲ್ಲ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ ಎಂಬುವುದರ ಬಗ್ಗೆ ಸಮರ್ಪಕ ಮಾಹಿತಿ ಸಿಕ್ಕಿಲ್ಲ ಜಾಮೀನು ಮಂಜೂರಾತಿಯ ಆದೇಶದ ಪ್ರತಿ ಸಿಕ್ಕಾಗ ಮಾತ್ರ ನಮಗೆ ಸಮಗ್ರ ಮಾಹಿತಿ ತಿಳಿಯುತ್ತದೆ.
ವಿಷಪ್ರಸಾದ ಸೇವನೆಯಿಂದ 17 ಭಕ್ತರು ಸಾವಿಗೀಡಾಗಿದ್ದು, 150ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಈಗಲೂ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸಂತ್ರಸ್ತರಿಗೆ ಈವರೆಗೂ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸುವುದಾಗಲಿ, ಪರಿಹಾರ ನೀಡುವುದಾಗಲಿ ಮಾಡಿಲ್ಲ ಇಂತಹ ಸಂದರ್ಭದಲ್ಲಿ ಜಾಮೀನು ನೀಡಿರುವುದರಿಂದ ಬಾದಿತರಿಗೆ ತೊಂದರೆಯಾಗಲಿದೆ ಎಂದು ಆಳಲನ್ನು ತೋಡಿಕೊಂಡರು.
ಇದೇ ವೇಳೆ ವಿಷ ಪ್ರಸಾದ ಭಾದಿತ ಕುಟುಂಬದ ಸದಸ್ಯನೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಈ ವೇಳೆ ಸಮೀಪದಲ್ಲಿದ್ದ ಸಂಬಂಧಿಕರು ಆತನನ್ನು ರಕ್ಷಣೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸುಳ್ವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಮೃತಪಟ್ಟ 17 ಜನರ ಭಾವಚಿತ್ರವನ್ನು ಹಿಡಿದು ತಮ್ಮ ಆಕ್ರೋಶ ಹೊರ ಹಾಕಿದರು.
---------------
ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಆರೋಪಿ ಮಹದೇವಸ್ವಾಮಿಗೆ ಜಾಮೀನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.