ಬಂಕಾಪುರ ಬಸ್‌ ನಿಲ್ದಾಣ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

KannadaprabhaNewsNetwork |  
Published : Jan 25, 2025, 01:04 AM IST
ಪೊಟೋ ಪೈಲ್ ನೇಮ್ ೨೪ಎಸ್‌ಜಿವಿ೩   ತಾಲೂಕಿನ ಬಂಕಾಪುರ ಕೇಂದ್ರ ಬಸ್ಸ ನಿಲ್ದಾಣದ ಅವ್ಯವಸ್ಥೆ ಹಾಗೂ ಮೂಲಭುತ ವ್ಯವಸ್ಥೆಯನ್ನು ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕಾರವಾರ ಇಳಕಲ್ ರಾಜ್ಯ ಹೇದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ಮಾಡಿ ಸವಣೂರು ಉಪ ವಿಭಾಗ ಅಧಿಕಾರಿ ಶ್ರೀಮತಿ ಮಮತಾ ಹೊಸಗೌಡ್ರ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಲ್ಲಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನ ಬಂಕಾಪುರ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸದಸ್ಯರು ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಶಿಗ್ಗಾಂವಿ:ತಾಲೂಕಿನ ಬಂಕಾಪುರ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸದಸ್ಯರು ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಸವಣೂರು ಉಪ ವಿಭಾಗ ಅಧಿಕಾರಿ ಮಮತಾ ಹೊಸಗೌಡ್ರ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದರು.

ಹಾವೇರಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಸರಿಯಾದ ಬಸ್ ವ್ಯವಸ್ಥೆ ಹಾಗೂ ಬಂಕಾಪುರ ಬಸ್ ನಿಲ್ದಾಣದಲ್ಲಿ ಸಿ.ಸಿ. ಕ್ಯಾಮೆರಾವನ್ನು ಹಾಗೂ ದ್ವಿಚಕ್ರ ವಾಹನಕ್ಕೆ ಸ್ಥಳವನ್ನು ನಿಗದಿ ಮಾಡಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವನ್ನು ಮಾಡಿಕೊಡಬೇಕು ಎಂದರು. ಮನವಿಯನ್ನು ಸಾರಿಗೆ ಇಲಾಖಾ ಅಧಿಕಾರಿಗಳಿಗೆ ಹಾಗೂ ಸವಣೂರ ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿದರು. ೮ ದಿನಗಳೊಳಗಾಗಿ ವ್ಯವಸ್ಥೆಯನ್ನು ಕಲ್ಪಿಸಬೇಕು ಇಲ್ಲದೆ ಹೋದರೆ ಉಗ್ರಪ್ರಮಾಣದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ