ಕನ್ನಡಪ್ರಭ ವಾರ್ತೆ ಮದ್ದೂರು
ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, ಮಾದನಾಯಕನಹಳ್ಳಿ ಠಾಣಾಧಿಕಾರಿ ಮುರಳೀಧರ್, ನೆಲಮಂಗಲ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ನರೇಂದ್ರಬಾಬು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಹೋರಾಟಗಾರ್ತಿಯರ ಮೇಲೆ ಮೃಗೀಯ ವರ್ತನೆ ತೋರಿರುವುದು ಅತ್ಯಂತ ಅಮಾನುಷ ವರ್ತನೆಯಾಗಿದೆ. ಪಟ್ಟಭದ್ರ ಜೊತೆ ಸೇರಿ ಪ್ರತಿಭಟನೆ ಹತ್ತಿಕುವ ಕೆಲಸಕ್ಕೆ ಪೊಲೀಸರು ಮುಂದಾಗಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಸಮಯೋಚಿತ ನಿರ್ಧಾರ ಕೈಗೊಂಡಿದ್ದಾರೆ. ಚಳುವಳಿಗಾರರ ಮೇಲೆ ಪೊಲೀಸರ ದೌರ್ಜನ್ಯ ಮಿತಿಮೀರುತ್ತಿದ್ದು, ಸರ್ಕಾರ ಕೂಡಲೇ ಮಾರ್ಗದರ್ಶನ ನೀಡಬೇಕೆಂದು ಆಗ್ರಹಿಸಿದರು.ಜಿಲ್ಲಾ ರೈತ ಮುಖಂಡರಾದ ಸೊ ಸಿ ಪ್ರಕಾಶ್ ಮಾತನಾಡಿ, ತನಿಖೆಗೂ ಮುಂಚಿತವಾಗಿ ಆ ಇಬ್ಬರು ಠಾಣಾಧಿಕಾರಿಗಳನ್ನು ಅಮಾನತುಗೊಳಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಎಲ್ಲಾ ಚಳವಳಿಗಾರರು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಆಯುಧಗಳ ಪೂಜೆ, ಮೆರವಣಿಗೆ
ಪಟ್ಟಣದ ಹೊರವಲಯದ ಕಿಕ್ಕೇರಮ್ಮ ದೇಗುಲದಲ್ಲಿ ದೇವಿಯ ವಾಹನ, ಮತ್ತಿತರ ಆಯುಧಗಳ ಪೂಜೆ, ಶ್ರದ್ಧಾಭಕ್ತಿಯಿಂದ ಮೆರವಣಿಗೆ ಮಾಡಲಾಯಿತು.
ದೇವಿಯ ಆಯುಧಗಳಾದ ಕತ್ತಿ, ಗುರಾಣಿ ಮತ್ತಿತರರ ಸಾಮಗ್ರಿ, ಕುದುರೆ ವಾಹನ ಮತ್ತಿತರ ವಸ್ತುಗಳನ್ನು ತೊಟ್ಟಿಲಿನಲ್ಲಿ ಪ್ರತಿಷ್ಟಾಪಿಸಿ ಮಂಗಳವಾದ್ಯದೊಂದಿಗೆ ಮೆರವಣಿಗೆ ಮಾಡಲಾಯಿತು. ಹೊಸಬೀದಿ, ರಥಬೀದಿ, ಕೋಟೆಗಣಪತಿ ಬೀದಿ, ಕೆ.ಎಸ್. ನರಸಿಂಹಸ್ವಾಮಿ ಬೀದಿ, ಸುಬ್ಬರಾಯರ ಛತ್ರದ ಬೀದಿಗಳಲ್ಲಿ ಸಾಗಿತು. ಭಕ್ತರು, ಮನೆಮಂದಿಗಳು ತೊಟ್ಟಿಲಿನಲ್ಲಿನ ದೇವಿ ವಾಹನ, ಆಯುಧಗಳಿಗೆ ಪೂಜಿಸಿ ನಮಿಸಿದರು.