ಆಜಾದ್ಪಾರ್ಕ್ ವೃತ್ತದವರೆಗೂ ಎಐಟಿಯುಸಿ, ಪ್ಲಾಂಟೇಷನ್ ಯೂನಿಯನ್, ಬಿಸಿಯೂಟ-ಅಂಗನವಾಡಿ ಕಾರ್ಯಕರ್ತೆಯರ ಮೆರವಣಿಗೆ
ಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಎಐಟಿಯುಸಿ, ಪ್ಲಾಂಟೇಷನ್ ಯೂನಿಯನ್, ಬಿಸಿಯೂಟ-ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ನೂರಾರು ಕಾರ್ಮಿಕರು ಧರಣಿ ನಡೆಸಿ, ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.
ಕಾರ್ಮಿಕರ, ಮಹಿಳೆಯರ, ರೈತರ, ಯುವಜನರ ಹಕ್ಕುಗಳನ್ನು ಹತ್ತಿಕ್ಕುತ್ತಿರುವ ಸರ್ಕಾರಗಳ ವಿರುದ್ಧ ವಿವಿಧ ಸಂಘಟನೆಗಳು ಕರೆ ನೀಡಿದ್ಧ ಪ್ರತಿಭಟನೆ ಅಂಗವಾಗಿ ಗುರುವಾರ ತಾಲೂಕು ಕಚೇರಿಯಿಂದ ಆಜಾದ್ಪಾರ್ಕ್ ವೃತ್ತದವರೆಗೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಾಗಿದ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಪೊಲೀಸರು ತಡೆಹಿಡಿದರು.ಪ್ಲಾಂಟೇಷನ್ ಯೂನಿಯನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮರಾಜ್, ದೇಶದಲ್ಲಿ ಶೇ.90ರಷ್ಟು ದುಡಿಯುವ ಜನರಿಗೆ ಸರ್ಕಾರಗಳು ಜನವಿರೋಧಿ ಕಾನೂನು ಕಾಯ್ದೆಗಳಡಿ ಹಕ್ಕುಗಳನ್ನು ಕಸಿದುಕೊಳ್ಳುತ್ತಿವೆ. ಈ ವಿರುದ್ಧ ಧ್ವನಿಗೂಡಿಸುವ ಪ್ರತಿಭಟನಾ ಕಾರರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಕಾರ್ಮಿಕರ ಬದುಕಿಗೆ ಮಾರಕವಾದ ಕೇಂದ್ರ ಸರ್ಕಾರದ ಹೊಸ ನಾಲ್ಕು ಕೋರ್ಡ್ ಹಿಂಪಡೆಯಬೇಕು. ಮನರೇಗಾ ಹೆಸರು ಬದಲಿಸಬಾರದು. ರೈತರಿಗೆ ಜಾರಿ ತಂದ ಶ್ರಮಶಕ್ತಿ ಕಾನೂನು ಬದಲಿಸಿ ಹಾಗೂ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆ ಯರಿಗೆ ಹನ್ನೇರಡು ವರ್ಷಗಳ ಕೇಂದ್ರ ಪಾಲನ್ನು ನೀಡಬೇಕು ಎಂದು ಒತ್ತಾಯಿಸಿದರು.ಕೇಂದ್ರದ ಹೊಸ ಕಾರ್ಮಿಕ ಕಾಯ್ದೆಯಲ್ಲಿ ಪ್ರತಿ ಕಾರ್ಮಿಕರಿಗೆ ಇಂದಿನ ಬೆಲೆ ಏರಿಕೆ ನಡುವೆ ನಿಗದಿಗೊಳಿಸಿದ ₹178 ಗಳಲ್ಲಿ ಜೀವನ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಈ ಕಾಯ್ದೆ ಕಾರ್ಮಿಕರಿಗೆ ನಷ್ಟವಾಗಿ ದೊಡ್ಡ ದೊಡ್ಡ ಉದ್ಯಮಿ, ಕಾರ್ಪೋರೇಟ್ಗಳಿಗೆ ಲಾಭ ಮಾಡಿಕೊಡಲಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಮರು ಚಿಂತನೆ ಮಾಡಬೇಕಿದೆ ಎಂದರು.
ಬಿಸಿಯೂಟ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ವಿಜಯ್ಕುಮಾರ್ ಮಾತನಾಡಿ ಕ್ಷೇತ್ರದ ಸಂಸದರು ಅಧಿವೇಶನದಲ್ಲಿ ಕಾರ್ಮಿಕರಿಗೆ ಅನುಕೂಲವಾಗುವ ಚರ್ಚೆಗಳು ನಡೆಸದೇ, ಕೇವಲ ರಾಹುಲ್, ಇಂದಿರಾ, ನೆಹರು ಬಗ್ಗೆ ಮಾತ ನಾಡಿ ಕಾಲಹರಣ ಮಾಡುತ್ತಿದ್ದು, ಸಂಸದರೇ ಮೊದಲು ಕಾರ್ಮಿಕರು ಮತ್ತು ಅವರ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರದಂತೆ ರಾಜ್ಯಸರ್ಕಾರ ಕಾರ್ಮಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೂ ಮುನ್ನ ಕಾರ್ಮಿಕರಿಗೆ 6ನೇ ಗ್ಯಾರಂಟಿ ಘೋಷಣೆ ಮಾಡಿತು. ಆದರೆ ಎರಡೂವರೆ ವರ್ಷ ಕಳೆದರೂ ಕಾರ್ಮಿಕರಿಗೆ ಗ್ಯಾರಂಟಿ ಭಾಗ್ಯ ಲಭ್ಯವಾಗಲಿಲ್ಲ. ಉಳ್ಳವರ ಮಕ್ಕಳು ಪದವೀಧರರಾದರೆ, ಕಾರ್ಮಿಕರ ಮಕ್ಕಳು ಕಾರ್ಮಿಕರಾಗೇ ಉಳಿದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ಮಾತನಾಡಿ, ದೇಶದ ಬಹುತೇಕ ಕಾರ್ಮಿಕರೇ ದೇಶದ ಆಧಾರಸ್ಥಂಭ. ಆ ದುಡಿಯ ವವರಿಗೆ ಸಬ್ಸಿಡಿ ಸಾಲ ಸೌಲಭ್ಯ ಕಲ್ಪಿಸದ ಕೇಂದ್ರ ಅದಾನಿ, ಅಂಬಾನಿ ಸೇರಿಶ್ರೀಮಂತ ವರ್ಗಕ್ಕೆ ಸಬ್ಸಿಡಿ ನೀಡುತ್ತಿದೆ ಎಂದು ದೂರಿದರು.ಕೇಂದ್ರ ಸರ್ಕಾರದ ದ್ವಂದ ನಿಲುವು, ರೈತ-ಕಾರ್ಮಿಕರ ವಿರೋಧಿ ಕಾಯ್ದೆಗಳ ಬಗ್ಗೆ ಜನತೆ ಎಚ್ಚೆತ್ತು ಚಳುವಳಿ ನಡೆಸ ದಿದ್ದಲ್ಲಿ ಮುಂದೊಂದು ದಿನ ಸಂಪೂರ್ಣ ದೇಶವನ್ನು ವಿದೇಶಕ್ಕೆ ಮಾರಾಟ ಮಾಡುವ ಮೂಲಕ ವಿದೇಶಿಗರ ಆಳ್ವಿಕೆಯಲ್ಲಿ ದೇಶದ ಪ್ರಜೆಗಳು ಮತ್ತೊಮ್ಮೆ ಗುಲಾಮರಂತೆ ಜೀವಿಸಬೇಕು ಎಂದು ಎಚ್ಚರಿಸಿದರು.
ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ರಮೇಶ್, ಅಂಗವನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರೀಟಾ ಫರ್ನಾಂಡೀಸ್, ಮುಖಂಡರಾದ ಇಂದುಮತಿ, ರೈತ ಸಂಘ ಹಾ ಗೂ ಪ್ರಗತಿಪರರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಹಾಜರಿದ್ದರು.ಫೋಟೋಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ಧ ಗುರುವಾರ ನಗರದ ಆಜಾದ್ಪಾರ್ಕ್ ವೃತ್ತದಲ್ಲಿ ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆ ಕಾರ್ಯಕರ್ತರು ನಗರದ ಮುಖ್ಯರಸ್ತೆಯಲ್ಲಿ ರ್ಯಾಲಿ ನಡೆಸಿದರು.